Yuvavahini

MAY 07, 2000 10.24 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಕೆ. ರಾಜೀವ ಪೂಜಾರಿ – ಅಧ್ಯಕ್ಷರು -1999-2000

ಕೆ. ರಾಜೀವ ಪೂಜಾರಿ ಇವರು ಯುವವಾಹಿನಿ (ರಿ) ಕೇಂದ್ರ ಸಮಿತಿಯಲ್ಲಿ 1999-2000 ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಇವರು ಅಧ್ಯಕ್ಷರಾಗಿದ್ದ ವರ್ಷದಲ್ಲಿ ಯುವವಾಹಿನಿಯ ನೂತನ ಘಟಕವು ಉಡುಪಿಯಲ್ಲಿ ಆರಂಭವಾಯಿತು. 1999 ರ ಆಗಸ್ಟ್ ತಿಂಗಳಲ್ಲಿ ಶ್ರೀ ಗುರು ಜಯಂತಿಯ ಪ್ರಯುಕ್ತ ಶ್ರೀ ಗುರು ಸಂದೇಶ ಯಾತ್ರೆಯನ್ನು ನಡೆಸಲಾಗಿತ್ತು. ಅವಿಭಜಿತ ದ.ಕ. ಜಿಲ್ಲೆಯಾದ್ಯಂತ 8 ಕಡೆಗಳಿಂದ ಹೊರಟು ಬಂದ ಗುರು ಸಂದೇಶ ಯಾತ್ರೆಯು ಬ್ರಹ್ಮಶ್ರೀ ನಾರಾಯಣ ಗುರುವರ್ಯರು ಪ್ರದಿಪಾದಿಸಿದ ತತ್ವಾದರ್ಶಗಳನ್ನು ಸಮಾಜದಲ್ಲಿ ಬಿತ್ತರಿಸುತ್ತಾ ಬಂಟ್ವಾಳ-ಬಿ.ಸಿ.ರೋಡಿನಲ್ಲಿ ಒಟ್ಟು ಸೇರಿ ಬೃಹತ್ ಯಾತ್ರೆ ನಡೆಸಿ ಬಿ.ಸಿ. ರೋಡಿನ ಜೋಡು ಮಾರ್ಗದಲ್ಲಿರುವ ಬಿಲ್ಲವ ಸಂಘದಲ್ಲಿ ಸಮಾಪನಗೊಂಡಿತು. ಅತ್ಯಂತ ಯಶಸ್ವಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 5000 ಕ್ಕೂ ಮಿಕ್ಕಿ ಸಮಾಜ ಬಾಂಧವರು ಸೇರಿದ್ದರು.

ದಿನಾಂಕ 19-10-1999 ರಿಂದ 21-10-1999 ರ ವರೆಗೆ ಮೂರು ದಿನಗಳ ಕಾಲ ಯುವವಾಹಿನಿ (ರಿ) ಕಟಪಾಡಿ ಘಟಕದ ವತಿಯಿಂದ ನಡೆದ ವಿದ್ಯಾರ್ಥಿ ಶಿಬಿರವು ಯುವವಾಹಿನಿಯಲ್ಲಿ ನವ ಚರಿತ್ರೆಯನ್ನೇ ನಿರ್ಮಿಸಿತು. ಸತತ ಮೂರು ದಿನಗಳವರೆಗೆ ಕೇಂದ್ರ ಸಮಿತಿಯ ಅಧ್ಯಕ್ಷರು ಶಿಬಿರದಲ್ಲಿಯೇ ಇದ್ದು ಶಿಬಿರದ ಯಶಸ್ಸಿನಲ್ಲಿ ಮುತುವರ್ಜಿ ವಹಿಸಿದ್ದರು.

2000 ನೇ ಫೆಬ್ರವರಿ ತಿಂಗಳಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಮಹಿಳಾ ಸಮಾವೇಶವು ನಡೆದಿತ್ತು. ಈ ಸಮಾವೇಶದಲ್ಲಿ ಸ್ವ-ಉದ್ಯೋಗದೊಂದಿಗೆ ಸ್ವಾವಲಂಬನದೆಡೆಗೆ ಎನ್ನುವ ಮೂಲಧ್ಯೇಯಕ್ಕೆ ಒತ್ತು ನೀಡಿ ಮಹಿಳೆಯರಿಗೆ ಸಹಾಯಕವಾಗ ಬಲ್ಲ ಅನೇಕ ವಿಚಾರಗಳು ಮಂಡನೆಯಾಗಿದ್ದವು.

ಕೆ. ರಾಜೀವ ಪೂಜಾರಿಯವರು ಎಂ.ಕಾಂ. ಸ್ನಾತಕೋತ್ತರ ಪದವೀಧರರು. ನವಮಂಗಳೂರು ಬಂದರು ಮಂಡಳಿಯಲ್ಲಿ ಹಿರಿಯ ಲೆಕ್ಕಾಧಿಕಾರಿಯಾಗಿ 36 ವರ್ಷಗಳ ಸೇವೆ ಸಲ್ಲಿಸಿ ಪ್ರಸಕ್ತ ನಿವೃತ್ತರಾಗಿದ್ದಾರೆ. ಇವರ ಮಡದಿ ಶ್ರೀಮತಿ ಲಲಿತಾ ಕೆ. ಇವರು ನವಮಂಗಳೂರು ಬಂದರು ಮಂಡಳಿಯಲ್ಲಿ ಉದ್ಯೋಗಿಯಾಗಿದ್ದಾರೆ. ಈ ದಂಪತಿಗಳ ಮಗ ಸಂದೇಶ್ ಮೆಕ್ಯಾನಿಕಲ್ ಇಂಜಿನಿಯರಾಗಿದ್ದು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿ ದ್ದಾರೆ. ಮಗಳು ಕು. ಚೈತ್ರಾ ಎಂ.ಬಿ.ಎ. ವಿದ್ಯಾರ್ಥಿನಿ.

ವಿಳಾಸ : ಸಂದೇಶ, ಬಂದರು ಮಂಡಳಿ ನೌಕರರ ವಸತಿ ಕಾಲೊನಿಯ ಹಿಂಬದಿ,
ಹೊಸಬೆಟ್ಟು, ಮಂಗಳೂರು -575 006
ಮೊಬೈಲ್: 9482042763

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!