05/10/2025 ಆದಿತ್ಯವಾರ
ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ
ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು.
ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನಾರಾಯಣ ಗುರುಗಳ ಆದರ್ಶವನ್ನು ಸಮಾಜದಲ್ಲಿ ಬೆಳೆಸುವುದೇ ಸಮಾಜಕ್ಕೆ ನೀಡುವ ಕೊಡುಗೆಯಾಗಿದೆ ಯುವಕರು ಕುಟುಂಬಕ್ಕೆ ಸೀಮಿತವಾಗದೆ ನಾರಾಯಣ ಗುರುಗಳ ವಿಚಾರದಡಿ ಬದುಕು ರೂಪಿಸಿಕೊಳ್ಳಬೇಕು ಎಂದರು.
ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷ ಭಗೀರಥ ಜಿ ಇವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿ ಎಲ್ಲರ ಬದುಕು ಉತ್ತಮವಾಗಿರಬೇಕು ಎಂಬುದೇ ಯುವವಾಹಿನಿಯ ಕಾಳಜಿ ಎಂದರು.
ಘಟಕದ ಅಧ್ಯಕ್ಷ ಗುರುರಾಜ ಗುರಿಪಳ್ಳ ಅಧ್ಯಕ್ಷತೆ ವಹಿಸಿದ್ದರು, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಶುಭ ಹಾರೈಸಿದರು, ಯುವ ವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಸಾವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಘಟಕದ ಈ ಹಿಂದಿನ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.
ಮಹಿಳಾ ಸಂಚಾಲನಾ ಸಮಿತಿಯ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ ಪ್ರಾರ್ಥಿಸಿ, ಘಟಕದ ಮಾಜಿ ಅಧ್ಯಕ್ಷ ಎಂ ಕೆ ಪ್ರಸಾದ್ ಸ್ವಾಗತಿಸಿ ಪ್ರಸ್ತಾವಿಸಿದರು, ಶ್ರೀಮತಿ ಶ್ವೇತ ಯುವರಾಜ್ ನಿರೂಪಿಸಿದರು ಕಾರ್ಯದರ್ಶಿ ಮಧುರ ರಾಘವ್ ವಂದಿಸಿದರು.


