ಘಟಕದ ಆಶ್ರಯದಲ್ಲಿ ದಿನಾಂಕ:02-11-2025 ಆದಿತ್ಯವಾರದಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು.
* ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನೆರವೇರಿಸಲಾಹಿತು.
* ನಂತರ ಸಭಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ವಠಾರದಲ್ಲಿ ಪ್ರಾಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನಿಶಾಂಕ್.ಎಸ್.ಕೋಟ್ಯಾನ್ ರವರು ವಹಿಸಿದ್ದು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಶ್ರೀ ಮೋಹನ್ ದಾಸ್ ಹೆಜಮಾಡಿ, ಶ್ರೀ ಗಣೇಶ್ ನಾರಾಯಣ ಪಂಡಿತ್, ಶ್ರೀ ಎಮ್. ಎ. ಗಫೂರ್,ಶ್ರೀ ಲೋಹಿತ್ ರೆಂಜಾಳ ಸುಳ್ಯ ಉಪಸ್ಥಿತರಿದ್ದರು.ತುಳಸಿ ಪೂಜೆಯ ಅಂಗವಾಗಿ ನಮ್ಮ ಊರಿನ ನಾಲ್ಕು ಕರೆಯ ಬಿಲ್ಲವ ಸದಸ್ಯರಿಗೆ ನಡೆದ ಆಟೋಟ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀ ಶರಣ್ ಕುಮಾರ್ ಮಟ್ಟು, ಶ್ರೀ ವಿಜಯ್ ಕುಮಾರ್ ಹೆಜಮಾಡಿಕೋಡಿ,ನವೀನ್ ಪಡು ಇನ್ನ ಇವರನ್ನು ಈ ಸಂದರ್ಭದಲ್ಲಿ ಗುರುತಿಸಲಾಯಿತು. ವೇದಿಕೆಯಲ್ಲಿ ಶ್ರೀ ಎಮ್ ಎ ಗಪೂರ್, ಶ್ರೀ ಗಣೇಶ ನಾರಾಯಣ ಪಂಡಿತ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಧೀರಜ್, ಮನೋಹರ್, ಶಿವರಾಮ್ ಜಿ ಅಮೀನ್, ನೆರವೇರಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ಪ್ರಾಪ್ತಿ ಆರ್ ಸುವರ್ಣ ಬಾಗವಹಿಸಿ ಎಲ್ಲರಿಗೂ ಧನ್ಯವಾದ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗಿತು.


