2025-26 ರ ಸಾಲಿನ ಪದಪ್ರದಾನ ಸಮಾರಂಭ
03.11.2025ರ ಸೋಮವಾರದಂದು ಕಾರ್ಕಳದ ಕಾರ್ಕಳ ಇನ್ ಬೈಪಾಸ್ ನಲ್ಲಿ ನಡೆಯಿತು.
ಘಟಕದ ಅಧ್ಯಕ್ಷರಾದ ಮಮತಾ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಹಿರಿಯರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಕಳ ಯುವವಾಹಿನಿಯು ಯುವ ಸದಸ್ಯರನ್ನು ಒಗ್ಗೂಡಿಸಿಕೊಂಡು ಶೈಕ್ಷಣಿಕ, ಧಾರ್ಮಿಕ, ಆರೋಗ್ಯಸೇವೆ ಮಾಡುವ ಜೊತೆಗೆ ಮಾದರಿ ಸಂಘವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು. ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ, ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಪ್ರಮಲ್ ಕುಮಾರ್, , ಜವಾಹರ ಬಾಲ್ ಮಂಚ್ ಇದರ ಜಿಲ್ಲಾ ಅಧ್ಯಕ್ಷರಾದ ಶೈಲಜಾ ರಾಜೇಜ್, ಕಾರ್ಕಳ ಘಟಕದ ಸ್ಥಾಪಕ ಅಧ್ಯಕ್ಷ ರಾದ ಸುಧಾಕರ್ ಪೂಜಾರಿ ಉಪಸ್ಥಿತರಿದ್ದರು. ಯುವವಾಹಿನಿ ಕಾರ್ಕಳ 2024-25ರ ಸಾಲಿನಲ್ಲಿ ನಡೆದ ಕಾರ್ಯಕ್ರಮಗಳ ವಿವರವುಳ್ಳ ವರದಿಯನ್ನು ಕಾರ್ಯದರ್ಶಿ ಸಂದೇಶ್ ಮಂಡಿಸಿದರು.ದಾನಿಗಳ ನೆರವಿನೊಂದಿಗೆ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಸುಮಾರು 50000 ಮೊತ್ತದ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ನೀಡಲಾಯಿತು, ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾದ ಪ್ತಕಾಶ್ ಪೂಜಾರಿ ಮತ್ತು ಕಾರ್ಯದರ್ಶಿ ರಾಕೇಶ್ ಅಮೀನ್ ಅವರೊಂದಿಗೆ ನೂತನ ತಂಡದ ಪದಾಧಿಕಾರಿಗಳು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಂಜುನಾಥ್ ಪೂಜಾರಿಯವರನ್ನು ಹಾಗೂ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ರು, ಕಿತ್ತೂರ್ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತ ರಾದ ಶೈಲಜಾ ರಾಜೇಶ್ ರವರನ್ನು ,ಸಮಾಜ ಸೇವಕರಾದ ಭಾಸ್ಕರ ಎಸ್ ಕೋಟ್ಯಾನ್, ಕೇಂದ್ರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರನ್ನು, ಪ್ರಸ್ತುತ ಅಧ್ಯಕ್ಷರಾದ ಮಮತಾ ಅಂಚನ್ ದಂಪತಿಗಳನ್ನು ಸನ್ಮಾನದೊಂದಿಗೆ ಅಭಿನಂದಿಸಲಾಯಿತು. ಘಟಕಕ್ಕೆ ನೂತನವಾಗಿ 46 ಮಂದಿ ಸದಸ್ಯರು ಸೇರ್ಪಡೆಯಾದರು.
ಸಂತೋಷ್, ನಿತಿನ್ ಅಜಿತ್ ಕಾರ್ಯಕ್ರಮ ನಿರೂಪಿಸಿ, ನೂತನ ಕಾರ್ಯದರ್ಶಿ ರಾಕೇಶ್ ಅಮೀನ್ ವಂದಿಸಿದರು.
DEC 01, 2025 2.32 PM IST


