Yuvavahini

DEC 01, 2025 2.55 PM IST

ಕೋಟಿ ಚೆನ್ನಯ್ಯ ಟ್ರೋಫಿ-2025 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್-ಯುವವಾಹಿನಿ (ರಿ.) ಬೆಂಗಳೂರು ಘಟಕ

ಕೋಟಿ ಚೆನ್ನಯ್ಯ ಟ್ರೋಫಿ-2025″ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್
ಭಾನುವಾರ, ಅಕ್ಟೋಬರ್ 12 ರಂದು ನಾಡಪ್ರಭು ಕೆಂಪೇಗೌಡ ಬ್ಯಾಡ್ಮಿಂಟನ್ ಕೋರ್ಟ್, ವಿಜಯನಗರ ದಲ್ಲಿ ನಡೆಯಿತು.

ಪುರುಷರ ಸಿಂಗಲ್ಸ್, ಡಬಲ್ಸ್, ಮಹಿಳೆಯರ ಡಬಲ್ಸ್ , ಮಿಕ್ಸಡ್ ಡಬಲ್ಸ್ ಪಂದ್ಯಗಳು* ನಡೆದವು.

ಮಧ್ಯಾಹ್ನ 3 ಗಂಟೆಯಿಂದ ಮಾಸಿಕ ಸಭೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಿತು.

ಬ್ಯಾಡ್ಮಿಂಟನ್ ಕೋರ್ಟ್, ರೆಫರಿಗಳು, ಜಡ್ಜ್ ಹಾಗೂ ಇತರೆ ಸ್ಥಳೀಯ ವ್ಯವಸ್ಥೆಗಳನ್ನು ಕ್ರೀಡಾ ನಿರ್ದೇಶಕರು ಕಿಶನ್ ಪೂಜಾರಿ ಮತ್ತು ರಕ್ಷಾ ಪ್ರಾಯೋಜಿಸಿದ್ದರು.

ಸುಂದರ ಟ್ರೋಫಿಗಳು ಮತ್ತು ಬಹುಮಾನಗಳನ್ನು ಯಜ್ನೇಶ್ ಪೂಜಾರಿ, ದುಬೈ — (ಸುಧೀರ್ ಪೂಜಾರಿ ಪೆರಾಡಿ ಅವರ ರೆಫೆರೆನ್ಸ್ ಮೂಲಕ) ಹಾಗೂ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚ್ಚಿಂದ್ರ ಕೋಟ್ಯಾನ್ ರವರು ಪ್ರಾಯೋಜಿಸಿದ್ದರು.

ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಘಟಕದ ಸದಸ್ಯರ ಉಪಸ್ಥಿತಿ ಪಂದ್ಯಾಟಕ್ಕೆ ಮೆರಗು ನೀಡಿತು. ನುರಿತ ಆಟಗಾರರು ಒಂದು ಕಡೆಯಿಂದ ಕಣಕ್ಕಿಳಿದರೆ ಇನ್ನೊಂದು ಕಡೆಯಿಂದ ಕ್ರೀಡಾ ಸ್ಪೂರ್ತಿಯೊಂದಿಗೆ ನಮ್ಮ ಕೆಲವು ಹೊಸ ಆಟಗಾರರ ಭಾಗವಹಿಸುವಿಕೆ ಕ್ರೀಡೆಯ ಮಹತ್ವವನ್ನು ಹೆಚ್ಚಿಸಿತು.
ಭಾಗವಹಿಸಿದ ಎಲ್ಲಾ ಆಟಗಾರರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟ ಆಡಿ ಗಮನ ಸೆಳೆದರು.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಾಲೆಂಜರ್ಸ್ ತಂಡದ ವಿನೋದ್ ರಾಜ್ ಚಾಂಪಿಯನ್ ಆದರೆ ತುಡರ್ ತಂಡದ ಕಿಶನ್ ಎರಡನೇ ಸ್ಥಾನವನ್ನು ಅಲಂಕರಿಸಿದರು.

ಪುರುಷರ ಡಬಲ್ಸ್ ವಿಭಾಗದಲ್ಲಿ ತುಡರ್ ತಂಡದ ಗಣೇಶ್ ಹಾಗೂ ಕಿಶನ್ ಜೋಡಿ ಚಾಂಪಿಯನ್ ಆದರೆ ಚಾಲೆಂಜರ್ಸ್ ತಂಡದ ವಿನೋದ್ ರಾಜ್ ಹಾಗೂ ಸುರೇಂದ್ರ ಜೋಡಿ ಎರಡನೇ ಸ್ಥಾನ ಪಡೆದರು.

ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ತುಡರ್ ತಂಡದ ಶ್ರಾವ್ಯ ಮತ್ತು ಅಮಿತ ಜೋಡಿ ಚಾಂಪಿಯನ್ ಆದರೆ ಪವರ್ ತಂಡದ ದೀಕ್ಷಾ ಹಾಗೂ ವೈಶು ಜೋಡಿ ಎರಡನೇ ಸ್ಥಾನ ಪಡೆದರು.

ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ತುಡರ್ ತಂಡದ ಕಿಶನ್ ಮತ್ತು ಶ್ರಾವ್ಯ ಜೋಡಿ ಚಾಂಪಿಯನ್ ಆದರೆ ಬಿರುವೆರ್ ತಂಡದ ಅನುಷಾ ಹಾಗೂ ರೋಹಿತ್ ಎರಡನೇ ಸ್ಥಾನ ಪಡೆದರು.

ತುಡರ್ ತಂಡದ ಎಲ್ಲಾ ಆಟಗಾರರ ಕಮಿಟ್ಮೆಂಟ್ ಎಲ್ಲಾ ವಿಭಾಗದಲ್ಲಿ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಗಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿತು.

ಭಾಗವಹಿಸಿದ ಎಲ್ಲಾ ಆಟಗಾರರು ಒಬ್ಬರಿಗೊಬ್ಬರು ಪ್ರೋತ್ಸಾಹ ನೀಡುತ್ತಾ ಆಟವಾಡಿ ಯುವವಾಹಿನಿ ಯನ್ನು ಗೆಲ್ಲಿಸಿದರು.

ಈ ಪಂದ್ಯಕೂಟದ ಮಧ್ಯೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಯುವವವೈಭವ 2025 ಪೂರ್ವಭಾವಿ ಸಭೆ ನಡೆಸಿ ರೂಪುರೇಷೆ ಬಗ್ಗೆ ವಿವರಣೆ ನೀಡಿದರು.

ಪಂದ್ಯಕೂಟದ ನಂತರ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪಣಪಿಲ , ಮಾಜಿ ಅಧ್ಯಕ್ಷರುಗಳು ಹಾಗೂ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಬೆಂಗಳೂರು ಘಟಕದ ಅಧ್ಯಕ್ಷ ಲೊಕೇಶ್ ಹಾಗೂ ಸದಸ್ಯೆ ದೀಪಾ ಇವರ ಸಮಾಗಮದಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!