ಯುವವಾಹಿನಿ(ರಿ)ಕೇಂದ್ರಸಮಿತಿಯ ಸಹಕಾರದೊಂದಿಗೆ
ಯುವವಾಹಿನಿ ಅಶ್ರಯ ಯೋಜನೆಯಡಿಯಲ್ಲಿ ನಿರ್ಮಿಸಿದ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಪೆಲತ್ತಡಿ ಕಮಲ ಪೂಜಾರ್ತಿಯವರಿಗೆ ಮನೆಯ ಹಸ್ತಾಂತರ ಕಾರ್ಯಕ್ರಮ ಹಾಗೂ ತುಳಸಿ ಪೂಜಾ ಆಚರಣೆ
ದಿನಾಂಕ 12.11.2025 ಬುಧವಾರ
. ಸಂಜೆ ಭಜನಾ ಕಾರ್ಯಕ್ರಮದ ಜೊತೆಗೆ ತುಳಸಿ ಪೂಜೆಯ ನಂತರ ಸಭಾ ಕಾರ್ಯಕ್ರಮವನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ನವೀನ್ ಚಂದ್ರ ಡಿ ಸುವರ್ಣ ಇವರು ಉದ್ಘಾಟಿಸಿದರು.
ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದರು.
ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಕೋಶಾಧಿಕಾರಿ ಶ್ರೀ ಪದ್ಮರಾಜ್ ಆರ್ ಪೂಜಾರಿಯವರು ಮನೆಯ ಕೀ ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ, ನಾರಾಯಣ ಗುರು ಸೇವಾ ಸಂಘ ಮಾಣಿ ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಪೂಜಾರಿ ಸೂರ್ಯ, ಮಂಗಳೂರಿನ ವಕೀಲರಾದ ಶ್ರೀ ರಂಜಿತ್ ಪೂಜಾರಿ ಮೈರ, ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜಯಂತಿ ಪೂಜಾರಿ, ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುಜಾತ ಸುರೇಶ್ ಪೂಜಾರಿ ಬಾಕಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಶ್ರೀ ನಾರಾಯಣ ಗುರು ಸಹಕಾರ ಸಂಘ ಮಾಣಿ ಇದರ ಅಧ್ಯಕ್ಷರಾದ ಶ್ರೀ ನಾರಾಯಣ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರುಗಳಾದ ಶ್ರೀ ಜಯಂತ ನಡುಬೈಲು, ಶ್ರೀ ಡಾ. ರಾಜಾರಾಮ್ ಕೆ ಬಿ, ಶ್ರೀ ರಾಜೇಶ್ ಬಿ ಭಾಗವಹಿಸಿದ್ದರು..
ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನು ಗೌರವಿಸಲಾಯಿತು, ವಿಶೇಷವಾಗಿ ಮನೆ ನಿರ್ಮಾಣದ ಕೆಲಸ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಸಮಾಜ ಸೇವೆ ನಿರ್ದೇಶಕರಾದ ಶ್ರೀ ರವಿಚಂದ್ರ ಬಾಬನ ಕಟ್ಟೆ, ಮತ್ತು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಶಿವರಾಜ್ ಪಿ.ಆರ್ ಅನಂತಾಡಿ ಇವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಬಾಬು ಪೂಜಾರಿ, ಘಟಕದ ಕಾರ್ಯದರ್ಶಿಯಾದ ಶ್ರೀ ದೀಪಕ್ ಪೆರಾಜೆ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಶ್ರೀ ಕಿರಣ್ ಗೋಳಿಕಟ್ಟೆ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಪದಾಧಿಕಾರಿಗಳು,ಯುವವಾಹಿನಿ ಮಾಣಿ ಘಟಕದ ಮಾಜಿ ಅಧ್ಯಕ್ಷರುಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ಶಿವರಾಜ್ ಪಿ.ಆರ್ ಅನಂತಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು. ಘಟಕದ ಕಾರ್ಯದರ್ಶಿಗಳಾದ ದೀಪಕ್ ಪೆರಾಜೆ ವಂದಿಸಿದರು. ಘಟಕದ ಸದಸ್ಯರಾದ ಶ್ರೀಮತಿ ರೇಣುಕಾ ಕಣಿಯೂರು ಮತ್ತು ಶ್ರೀ ರಾಜೇಶ್ ಬಲ್ಯ ಕಾರ್ಯಕ್ರಮವನ್ನ ನಿರೂಪಿಸಿದರು.


