Yuvavahini

DEC 04, 2025 5.38 PM IST

ಶಿವಗಿರಿ ಯಾತ್ರೆ-ಯುವವಾಹಿನಿ (ರಿ.) ಮಂಗಳೂರು ಘಟಕ

ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಭೂಮಿ ಕೇರಳದ ಶಿವಗಿರಿಗೆ ಯಾತ್ರೆಯನ್ನು ಅ. 11ರಿಂದ ಅ. 14ರವರೆಗೆ ಹಮ್ಮಿಕೊಳ್ಳಲಾಗಿತ್ತು.

ಅ. 11ರಂದು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ 49 ಭಕ್ತರನ್ನು ಒಳಗೊಂಡ ಯಾತ್ರಾರ್ಥಿಗಳ ತಂಡ ಹೊರಟು, ಮರುದಿನ ಬೆಳಗ್ಗೆ ಶಿವಗಿರಿ ತಲುಪಿ ಶಾರದಾ ಮಠ, ವೈದಿಕ ಮಠ ಮತ್ತು ಗುರು ಸಮಾಧಿಯನ್ನು ವೀಕ್ಷಿಸಿತು. ಬೆಳಗಿನ ಉಪಹಾರದ ನಂತರ ಚಂಬಲಂತಿಯಲ್ಲಿ ಗುರುಗಳ ಜನ್ಮಗ್ರಹ ದರ್ಶನ ಪಡೆದ ಯಾತ್ರಾರ್ಥಿಗಳು, ಬಳಿಕ ಗುರುಗಳು ಸ್ಥಾಪಿಸಿದ ಮೂರನೇ ದೇವಸ್ಥಾನವಾದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಅಲ್ಲಿ ಆಶ್ರಮದಲ್ಲಿ ನಡೆದ ಗುರು ಪೂಜೆಯಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನದ ಅನ್ನಪ್ರಸಾದವನ್ನು ಸೇವಿಸಿದರು. ನಂತರ ಕನ್ಯಾಕುಮಾರಿಯತ್ತ ಪ್ರಯಾಣ ಬೆಳೆಸಿ ಸ್ವಾಮಿ ವಿವೇಕಾನಂದ ರಾಕ್ ವೀಕ್ಷಣೆ ಹಾಗೂ ಕನ್ಯಾಕುಮಾರಿ ದೇವಿಯ ದರ್ಶನ ಪಡೆದರು.

ಮರುತಮಲೆ ಆಶ್ರಮದಲ್ಲಿ ರಾತ್ರಿಯ ವಿಶ್ರಾಂತಿ ಮಾಡಿದ ಯಾತ್ರಾರ್ಥಿಗಳು ಮರುದಿನ ಬೆಳಗ್ಗೆ ಸತ್ಸಂಗದಲ್ಲಿ ಭಾಗವಹಿಸಿ, ಮರುತಮಲೆ ಬೆಟ್ಟ ಏರಿ ಗುರುಗಳ ತಪೋಭೂಮಿ ಗುಹೆಯ ದರ್ಶನ ಪಡೆದುಕೊಂಡರು. ಬೆಳಗಿನ ಉಪಹಾರದ ನಂತರ ತಂಡವು ಅರವಿಪುರಂಗೆ ತೆರಳಿ ನೇಯರ್ ನದಿ ಹಾಗೂ ನಾರಾಯಣ ಗುರುಗಳು ಸ್ಥಾಪಿಸಿದ ಮೊದಲ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅನ್ನಪ್ರಸಾದ ಸೇವನೆ ಮಾಡಿತು.

ಅರವಿಪುರಂನ ನಂತರ ತಂಡವು ಕೇರಳದ ಪ್ರಸಿದ್ಧ ಕವಿ ಕುಮಾರ ಆಶಾನ್ ಮ್ಯೂಸಿಯಂಗೆ ಭೇಟಿ ನೀಡಿ ಅವರ ಜೀವನ ಕುರಿತ ಮಾಹಿತಿಗಳನ್ನು ತಿಳಿದುಕೊಂಡಿತು. ಕೊನೆಗೆ ಕೊಲತುಕೆರೆ ಕ್ಷೇತ್ರದ ದರ್ಶನದ ಬಳಿಕ ತ್ರಿವೇಂಡ್ರಮ್ ರೈಲ್ವೆ ನಿಲ್ದಾಣದಿಂದ ಮಂಗಳೂರಿನತ್ತ ಪ್ರಯಾಣ ಬೆಳೆಸಿತು.

ಯಾತ್ರಾರ್ಥಿಗಳು ಈ ಯಾತ್ರೆಯು ಅವರಿಗೆ ನಾರಾಯಣ ಗುರುಗಳ ಆದರ್ಶಗಳು, ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಯ ಬಗ್ಗೆ ಆಳವಾದ ಅರಿವು ಮೂಡಿಸಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯಾತ್ರೆಯ ಮಾರ್ಗದರ್ಶಕರಾದ ರಾಮಚಂದ್ರ ಪೂಜಾರಿಯವರು ಗುರುಗಳ ಜೀವನ ಹಾಗೂ ತತ್ತ್ವಚಿಂತನೆಗಳ ಕುರಿತು ಮನಮುಟ್ಟುವ ರೀತಿ ಮಾಹಿತಿಗಳನ್ನು ನೀಡಿದರು. ಸಂಚಾಲಕರಾದ ಯತೀಶ್ ಪೂಜಾರಿ ಹಾಗೂ ಸಹಸಂಚಾಲಕರಾದ ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಯಾತ್ರೆಯು ಶ್ರದ್ಧಾ-ಭಕ್ತಿಯಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!