ದಿನಾಂಕ 22/11/2025 ಯುವವಾಹಿನಿ ಸಭಾಂಗಣ ಶ್ರೀಮತಿ ನೈನಾ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆ ಯೊಂದಿಗೆ ಪ್ರಾರಂಭವಾಯಿತು. ಅಧ್ಯಕ್ಷರು ಬಂದಿರುವ ಎಲ್ಲರನ್ನು ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಅವರು ತನ್ನ ಪ್ರಸ್ತಾವಿಕ ನುಡಿಯಲ್ಲಿ ಯುವವಾಹಿನಿಯ ಮಹಿಳಾ ಘಟಕ ಹಿಂದಿನಿಂದ ಇಂದಿನವರಗೆ ನಡೆದು ಬಂದ ಹಾದಿಯ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು.
ಶ್ರೀಮತಿ ನಮಿತಾ ಶ್ಯಾಮ, ಸಲಹಾ ಸಮಿತಿ ಸದಸ್ಯರು, ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವ ವಿದ್ಯಾನಿಲಯ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಿ ಅವರು ಘಟಕದ 2024-2025 ರ ವಾರ್ಷಿಕ ವರದಿ ಓದಿದರು. ಚುನಾವಣಾಧಿಕಾರಿಯಾದ ಶ್ರೀಮತಿ ಶುಭ ರಾಜೇಂದ್ರ ಅವರು ನೂತನ ಕಾರ್ಯಕಾರಿ ಸದಸ್ಯರ ವ್ಯಕ್ತಿ ಪರಿಚಯ ನೀಡಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಅವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ಭೋದನೆ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿರುವ ಶ್ರೀಮತಿ ನಮಿತಾ ಶ್ಯಾಮ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಕೆ ನೀಡಿ ಘಟಕದ ಕಾರ್ಯಕ್ರಮದ ಬಗ್ಗೆ ಹಿತವಚನ ನೀಡಿ ಮುಂದೆಯೂ ಉತ್ತಮ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿರುವ ಶ್ರೀಮತಿ ಶ್ವೇತಾ ಪೂಜಾರಿ ಅವರು ನೂತನ ತಂಡಕ್ಕೆ ಶುಭ ಹಾರೈಸಿ ಹಿತವಚನ ನುಡಿದರು. ಬಳಿಕ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀ ಜೇತೇoದ್ರ ಸುವರ್ಣ ಅವರನ್ನು ಗೌರವಿಸಲಾಯಿತು.
ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ನೀಡಲಾಯಿತು.ಬಳಿಕ ನಿರ್ಗಮನ ಅಧ್ಯಕ್ಷರು ಮಾತನಾಡಿ ಎಲ್ಲಾ ಸದಸ್ಯರಿಗೂ ಘಟಕವನ್ನು ನಡೆಸಲು ಅವಕಾಶ ಸಿಗಬೇಕು ಎಂದು ಸಣ್ಣ ಸಣ್ಣ ಕಾರ್ಯಕ್ರಮ ನಡೆಸಿ ಘಟಕವನ್ನು ಮುನ್ನಡೆಸಲು ಸಾಧ್ಯವಿದೆ ಎಂದು ತಿಳಿಸಿದರು. ನಂತರ ನೂತನ ಅಧ್ಯಕ್ಷರು ಶ್ರೀಮತಿ ಕಸ್ತೂರಿ ಮಹೇಶ್ ಅವರು ತಮಗೆ ಘಟಕದ ಎಲ್ಲಾ ಸದಸ್ಯರ ಸಹಕಾರ ನೀಡಬೇಕೆಂದು ಕೋರಿದರು. ನೂತನ ಕಾರ್ಯದರ್ಶಿ ಶ್ರೀಮತಿ ಸೋನಿಯಾ ರಾಜ್ ಅವರು ಧನ್ಯವಾದ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಅಧ್ಯಕ್ಷರಾದ ಶ್ರೀಮತಿ ರೇಖಾ ಗೋಪಾಲ್ ಅವರು ನಡೆಸಿಕೊಟ್ಟರು
DEC 12, 2025 5.57 AM IST


