Yuvavahini

APR 27, 2003 10.40 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ತುಕಾರಾಮ್ ಎನ್. ಅಧ್ಯಕ್ಷರು – 2002-03

ತುಕಾರಾಮ ಎನ್. ಇವರು ಯುವವಾಹಿನಿ(ರಿ) ಕೇಂದ್ರ ಸಮಿತಿಯ 2002-03 ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. 2-5-1962 ರಲ್ಲಿ ಜನಿಸಿದ ಇವರು 1997-98 ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಬಳಿಕ ’ಸಿಂಚನ ಪತ್ರಿಕೆಯ ಸಂಪಾದಕರಾಗಿ, 2001-02 ರಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಶಾಲಿಯಾಗಿರುತ್ತಾರೆ.

ಇವರು ಕೇಂದ್ರ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ’ಕೋಟಿ-ಚೆನ್ನಯ್ಯ’ ರಾಷ್ಟ್ರೀಯ ಕ್ರೀಡಾಕೂಟವನ್ನು ಬಿಲ್ಲವ ಮಹಾಮಂಡಲದ ಸಹಯೋಗದೊಂದಿಗೆ ದಿನಾಂಕ 12-5-2002 ರಂದು ನಡೆಸಲಾಗಿದ್ದು, ಹಲವಾರು ಯುವ ಪ್ರತಿಭೆಗಳು ಇದರಿಂದ ಬೆಳಕಿಗೆ ಬರುವಂತೆ ಆಗಿರುತ್ತದೆ.

ನಮ್ಮ ಸಮಾಜದ ಹಿರಿಯ ಸಾಹಿತಿ, ಸಾಹಿತ್ಯ ಕ್ಷೇತ್ರದ ದಿಗ್ಗಜ, ನಾಡಿನ ಕಣ್ಮಣಿ, ನಟ, ನಾಟಕಕರ್ತರಾಗಿ, ಕಾದಂಬರಿ ಕಾರರಾಗಿ ಹೆಸರುವಾಸಿಯಾದ ದಿ| ವಿಶುಕುಮಾರ್‌ರವರ ಸವಿ ನೆನಪಿಗಾಗಿ ಹಾಗೂ ಸಮಾಜದ ಯುವ ಬರಹಗಾರರನ್ನು ಬೆಳಕಿಗೆ ತರುವುದಕ್ಕೋಸ್ಕರ ವಿಶುಕುಮಾರ್ ಕಾರ್ಯಕ್ರಮ ದಿನಾಂಕ 3-11-2002 ರಂದು ಬಹಳ ಯಶಸ್ವಿಯಾಗಿ ಮೂಡಿಬಂದಿದ್ದು ಜಾತಿ ಚೌಕಟ್ಟಿನ ಹೊರಗಿರುವ ಸಾಹಿತ್ಯ ಲೋಕಕ್ಕೆ ಹಾಗೂ ಇತರ ಬರಹಗಾರರಿಗೆ ವಿಶುಕುಮಾರ್ ರವರನ್ನು ಮತ್ತೆ ನೆನಪಿಸಿಕೊಡುವಲ್ಲಿ ಸಹಕಾರಿಯಾಗಿದೆ. ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಕಾರ್ಯದರ್ಶಿ ಶ್ರೀ ವಿ.ಗ. ನಾಯಕ, ಡಾ| ನಾ. ಮೊಗಸಾಲೆ, ಪ್ರೊ. ಪಾ. ಸಂಜೀವ ಬೋಳಾರ್, ಶ್ರೀಮತಿ ಸಾರಾ ಅಬೂಬಕ್ಕರ್, ಶ್ರೀ ಬಿ. ಜನಾರ್ಧನ ಭಟ್, ಡಾ| ಸಬೀಹಾ ಭೂಮೇಗೌಡ, ಅಂತರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ ಶ್ರೀ ಸದಾನಂದ ಸುವರ್ಣ ಹಾಗೂ ಇನ್ನಿತರ ನೂರಾರು ಸಾಹಿತಿಗಳು, ಸಾಹಿತ್ಯಾಸಕ್ತರು ಬಹು ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆ ದೊರೆತಿರುವುದರಿಂದ ಹಾಗೂ ಹಿರಿಯ ಸಾಹಿತಿಗಳ ಅಭಿಪ್ರಾಯ ಪಡೆದು ವಿಶುಕುಮಾರ್ ನೆನಪಿನಲ್ಲಿ ಸಾಹಿತ್ಯ ಪ್ರಶಸ್ತಿಯೊಂದನ್ನು ಹುಟ್ಟುಹಾಕಿ ಪ್ರತಿ ವರ್ಷ ನೀಡಲು ಮುಂದಾಗಿದೆ. ಅದೇ ರೀತಿ 28-4-2003 ರಂದು ನಡೆದ ಯುವವಾಹಿನಿಯ ವಾರ್ಷಿಕ ಸಮಾವೇಶದಂದು ಡಾ| ನಾ.ಮೊಗಸಾಲೆ ಅವರ ಪಂಥ ಕಾದಂಬರಿಗೆ ಪ್ರಥಮ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

’ವಿಶುಕುಮಾರ್ ದತ್ತಿ ನಿಧಿ’ ಸಂಚಾಲಕರಾಗಿ, ವಿದ್ಯಾನಿಧಿಯ ಸಂಚಾಲಕರಾಗಿ, ಕೇಂದ್ರ ಸಮಿತಿಗಳಲ್ಲಿ ವಿವಿಧ, ಪದಾಧಿಕಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಿಯಾಗಿರುತ್ತಾರೆ. ಇವರ ಧರ್ಮಪತ್ನಿ ಶ್ರೀಮತಿ ಸೌಮ್ಯಲತಾರವರು ಅಧ್ಯಾಪಕಿಯಾಗಿದ್ದು, ಪುತ್ರ ತುಷಾರ್ ಇವರು ಬಿ.ಸಿ.ಎ. ವಿದ್ಯಾರ್ಥಿ ಇವರೊಂದಿಗೆ ಸಂತೃಪ್ತಿಯ ಜೀವನ ನಡೆಸಿಕೊಂಡಿರುತ್ತಾರೆ.

ವಿಳಾಸ : ತುಷಾರ, ನೆಕ್ಕಿಲಗುಡ್ಡೆ, ಪ್ರಶಾಂತ್ ನಗರ, ದೇರೇಬೈಲ್ ಕೊಂಚಾಡಿ, ಮಂಗಳೂರು-575 006
ಸೆಲ್: 9448696942

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!