16/11/2025 ಭಾನುವಾರ ಸ್ಥಳ.ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ
ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ
ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು, ಹಾಗೂ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಶ್ರೀ ಸಾತ್ವಿಕ್ ನೆರವೇರಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಕುಲಾಲ್, ಬಿಲ್ಲವ ಸಮಾಜ ಸೇವಾ ಸಂಘ ಮುದರಂಗಡಿ ಇದರ ಪೂರ್ವಾಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ ಕೇಂಜ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶರ್ಮಿಳಾ ಹಾಗೂ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ *ಶ್ರೀಮತಿ ಪೂರ್ಣಿಮ ವಿಧಿತ್ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು ಹಾಗೆಯೇ *ಶ್ರೀಮತಿ ಚೈತ್ರ ಗಣೇಶ್ ಮತ್ತು ಶ್ರೀಮತಿ ಸುಷ್ಮಾ ಸುನಿಲ್ ಕಾರ್ಯಕ್ರಮ ನಿರೂಪಿಸಿದರು
ಸಮಾರೋಪ
ಕಲಾಶ್ರೀ ಮತ್ತು ಕಲಾರತ್ನ* ಪ್ರಶಸ್ತಿ ಪ್ರಧಾನ ಸಮಾರಂಭ
ಘಟಕದ ಸದಸ್ಯರಾದ ಶ್ರೀಮತಿ ಸುಜಾತಾ ಹರೀಶ್ ಮತ್ತು ಶ್ರೀಮತಿ ಸುಗಂಧಿ ಶ್ಯಾಮ್ ಇವರ ಪ್ರಾರ್ಥನೆಯೊಂದಿಗೆ ಆರಂಭವಾದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು ಮತ್ತು ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.
ಈ ಸಂದರ್ಭ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಯುವವಾಹಿನಿ(ರಿ.)ಕೇಂದ್ರ ಸಮಿತಿ ಮಂಗಳೂರು ಇದರ ದ್ವಿತೀಯ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್,
ಜ್ಯೋತಿಷ್ಯ ಆಗಮ ಪುರೋಹಿತರಾದ ವೇದಮೂರ್ತಿ ಪಾದೆಬೆಟ್ಟು ರಾಘವೇಂದ್ರ ಆಚಾರ್ಯ, ವಿದ್ಯಾವರ್ಧಕ ಸಂಘ (ರಿ.) ಶಿರ್ವ ಇದರ ಆಡಳಿತಾಧಿಕಾರಿಯಾದ ಪ್ರೊ. ವೈ ಭಾಸ್ಕರ್ ಶೆಟ್ಟಿ, ಬಿಲ್ಲವ ಸಂಘ (ರಿ.) ಪಡುಬಿದ್ರಿ ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶರ್ಮಿಳಾ ಹಾಗೂ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ ವಿಧಿತ್ ಉಪಸ್ಥಿತರಿದ್ದರು.
ಮಕ್ಕಳ ಹಬ್ಬದ ಪ್ರಯುಕ್ತ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೆಯೇ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಮಾರಿ ಪ್ರೇಕ್ಷ ಅಮೀನ್, ರಂಜಿತ್ ಅವರಾಲು ಹಾಗೂ ಸುಮಿಶ್ ಸುಕೇಶ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು.
ಹಾಗೆಯೇ ಶ್ರೀಮತಿ ಚಿತ್ರಾಕ್ಷಿ ಹಾಗೂ ಕುಟ್ಟಿ ಕೋಟ್ಯಾನ್ ರವರ ಮಗನಾದ ಶ್ರೀ ಅಭಿಷೇಕ್ ಕೋಟ್ಯಾನ್ ಇವರ ವತಿಯಿಂದ 7 ಜನ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ವಿಭಾಗ 1 ಮತ್ತು ವಿಭಾಗ 2 ರ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 4ನೇ ತರಗತಿಯ ಸಾಕ್ಷಿ ಇವರಿಗೆ ಕಲಾಶ್ರೀ ಮತ್ತು 6ನೇ ತರಗತಿಯ ಅನ್ವಿತ ಮೂಲ್ಯ ಇವರಿಗೆ ಕಲಾರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಸಮಾರಂಭದ ಕೊನೆಯಲ್ಲಿ ಘಟಕದ ಕಾರ್ಯದರ್ಶಿ ಶ್ರೀ ಭಾಸ್ಕರ್ ಎನ್ ಅಂಚನ್ ಸರ್ವರಿಗೂ ಧನ್ಯವಾದ ಸಲ್ಲಿಸಿದರು.
ಕುಮಾರಿ ಯಶೋಧ ಪಡುಬಿದ್ರಿ ಮತ್ತು ಹರೀಶ್ ಕೋಟ್ಯಾನ್ ಉಳ್ಳೂರು ಸಮಾರೋಪ ಸಮಾರಂಭದ ನಿರೂಪಣೆ ಗೈದರು


