14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ
ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ
ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.
ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ ಮುಲ್ಕಿ ಘಟಕವು ಒಂದು ಪ್ರತಿಷ್ಟಿತ ಘಟಕವಾಗಿದ್ದು ನಡೆಸುವ ಪ್ರತಿಯೊಂದು ಕಾರ್ಯಕ್ರಮ ಅರ್ಥಪೂರ್ಣ ವಾಗಿರುತ್ತದೆ. ಈ ಬಾಲಿಕಾಶ್ರಮ ಅದೆಷ್ಟೋ ಮಕ್ಕಳಿಗೆ ಆಶ್ರಯವನ್ನು ನೀಡಿದೆ ಮಕ್ಕಳು ಈ ಸಂಸ್ಥೆಯನ್ನು ಮರೆಯದಿರಿ ಎಂದರು.
ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಘಟಕದ ಹಿರಿಯ ಸದಸ್ಯೆ ಸುಲೋಚನ ಜಿ ಅಂಚನ್ ರವರು ಆಶ್ರಮ ದ ಎಲ್ಲಾ ಮಕ್ಕಳಿಗೆ ವಿಶೇಷವಾಗಿ ಬಹುಮಾನ ನೀಡಿದರು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕಾದ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು.ವೇದಿಕೆಯಲ್ಲಿ ಶ್ರೀಮತಿ ನಿರ್ಮಲ ಲೋಕೇಶ್ ಕೋಟ್ಯಾನ್, ಬಾಲಿಕಾಶ್ರಮ ದ ಶ್ರೀಮತಿ ಶಾಂತಿ, ಘಟಕದ ಕಾರ್ಯದರ್ಶಿ ಕು. ಪ್ರೇರಣಾ ಡಿ. ಕಾರ್ಯಕ್ರಮ ನಿರ್ದೇಶಕಿ ಕು. ಯಶಸ್ವಿನಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಮೊದಲು ಮಾಜಿ ಅಧ್ಯಕ್ಷ ಜಯಕುಮಾರ್ ಕುಬೇವೂರು ರವರು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು.
ಆಶ್ರಮದ ಮಕ್ಕಳು ಪ್ರಾರ್ಥಿಸಿದರು, ಘಟಕದ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು ಸ್ವಾಗತಿಸಿದರು, ಕು . ಯಶಸ್ವಿನಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕು. ಪ್ರೇರಣಾ ಡಿ ವಂದಿಸಿದರು ಮಾಜಿ ಅಧ್ಯಕ್ಷ ಸತೀಶ್ ಕಿಲ್ಪಾಡಿ ನಿರೂಪಿಸಿದರು. ನಂತರ ಎಲ್ಲಾ ಮಕ್ಕಳಿಗೆ ವಿಶೇಷ ಭೋಜನ ವಿತರಿಸಲಾಯಿತು .


