Yuvavahini

MAY 08, 2005 10.51 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಜಿತೇಂದ್ರ ಜೆ. ಸುವರ್ಣ – ಅಧ್ಯಕ್ಷರು -2004-05

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ದಿನಾಂಕ 2-9-1971 ರಲ್ಲಿ ಜನಿಸಿದ ಜಿತೇಂದ್ರ ಜೆ.ಸುವರ್ಣರವರು ಬಿ.ಕಾಂ. ಪದವೀದರರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವರು. ಯುವವಾಹಿನಿಯ 2004-05 ರ ಸಾಲಿನ ಅಧ್ಯಕ್ಷರಾಗಿ ಎಲ್ಲಾ ಘಟಕದೊಂದಿಗೆ ನಿಕಟ ಸಂಪರ್ಕವಿರಿಸಿ ಘಟಕಗಳು ಉತ್ತಮ ಕಾರ್ಯಕ್ರಮವನ್ನು ನಡೆಸಿಕೊಳ್ಳುವಲ್ಲಿ ಸಹಕರಿಸಿ ಸಂಸ್ಥೆಯನ್ನು ಮುನ್ನಡೆಸಿದವರು. ಉದ್ಯಮಿಯಾಗಿರುವ ಇವರು ಕೊಡುಗೈದಾನಿಯಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ಅನುಭವ ಹೊಂದಿದವರಾಗಿರುತ್ತಾರೆ. ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಮಾಜಿ ಉಪಾಧ್ಯಕ್ಷರಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸಿನ ಗ್ರಾಮ ಮಟ್ಟ, ಮಂಡಳಿ ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಪದಾಧಿಕಾರಿಗಳಾಗಿ ಬಂಟ್ವಾಳ ಬಿಲ್ಲವ ಸಂಘದ ಕಾರ್‍ಯಕಾರಿ ಸಮಿತಿ ಸದಸ್ಯರಾಗಿ ಕೆಲಸ ಮಾಡಿರುವ ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಮರಳು ದೋಣಿ ಮಾಲಕರ ಮತ್ತು ಕಾರ್ಮಿಕರ ಸಂಘ(ರಿ), ಮಂಗಳೂರು ಇದರ ಅಧ್ಯಕ್ಷರಾಗಿ ಕರ್ನಾಟಕ ಕರಾವಳಿ ಮರಳು ಗುತ್ತಿಗೆದಾರರು ಹಾಗೂ ಕಾರ್ಮಿಕರ ಹಿತರಕ್ಷಣಾ ಸಮಿತಿ ಇದರ ಉಪಾಧ್ಯಕ್ಷರಾಗಿ ದುಡಿಯುತ್ತಿದ್ದಾರೆ.

ಇವರು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಬಂಟ್ವಾಳ ತಾಲೂಕಿನಾದ್ಯಂತ ಉಚಿತ ನೇತೃ ತಪಾಸನಾ ಶಿಬಿರ, ಬೈದ್ಯಶ್ರೀ ಕ್ರೀಡೋತ್ಸವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಶಿಬಿರ, ರಕ್ತದಾನ ಶಿಬಿರ, ಸದಸ್ಯರಿಗೆ ವ್ಯಕ್ತಿತ್ವ ವಿಕಸನ ಶಿಬಿರ ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡಿ ಘಟಕವನ್ನು ಬಲಿಷ್ಠಗೊಳಿಸಿ ಕೆಲಸ ಮಾಡಿದ ಅನುಭವ ಇರುವ ಇವರು ಕೇಂದ್ರ ಸಮಿತಿಯಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ ಬಳಿಕ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸಮರ್ಥವಾಗಿ ನಿರ್ವಹಿಸಿರುತ್ತಾರೆ.

ಶ್ರೀ ವಿಜಯಲಕ್ಷ್ಮಿ ಯುವಕ ಮಂಡಲ(ರಿ), ನರಿಕೊಂಬು ಇದರ 2 ಬಾರಿ ಅಧ್ಯಕ್ಷರಾಗಿದ್ದ ಇವರು ರಾಷ್ಟ್ರಮಟ್ಟದ ಹೊನಲು ಬೆಳಕಿನ ವಿಜಯಲಕ್ಷ್ಮಿ ಕ್ರೀಡೋತ್ಸವವನ್ನು ಬಹಳ ಅದ್ದೂರಿಯಾಗಿ ನಡೆಸಿ ಸರ್ವಧರ್ಮ ಸಮ್ಮೇಳನ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮಾಡಿ ಖ್ಯಾತಿಯನ್ನು ಹೊಂದಿರುತ್ತಾರೆ.

ವಿಳಾಸ: ಶ್ರೀ ಗುರುಜ್ಯೋತಿ, ಮಂಗಳಾದೇವಿ ದೇವಸ್ಥಾನ ರಸ್ತೆ, ಮಂಗಳೂರು – 575 001
ಮೊಬೈಲ್: 9739029579

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!