Yuvavahini

MAY 28, 2006 10.54 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ತಾರಾನಾಥ್ ಎಚ್. ಬಿ. – ಅಧ್ಯಕ್ಷರು -2005-06

2005-06 ಯುವವಾಹಿನಿಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ವರ್ಷ. ಯುವವಾಹಿನಿ ಬಹುದಿನಗಳಿಂದ ಕಂಡ ಕನಸು ನನಸಾದ ಸಮಯ. ಬ್ರಹ್ಮಶ್ರೀ ನಾರಾಯಣ ಗುರುಗಳ 150 ನೇ ಜಯಂತಿಯ ವರ್ಷಾ ಚಾರಣೆಯ ಸಂಭ್ರಮದಲ್ಲಿ ಅವರ ಬದುಕನ್ನು ಸಾಕ್ಷ್ಯ ಚಿತ್ರದ ಮೂಲಕ ಸಮಾಜಕ್ಕರ್ಪಿಸಿದ ವರ್ಷ. ದಿನಾಂಕ 4-9-2005 ರಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರನ ದಿವ್ಯ ಸನ್ನಿಧಿಯಲ್ಲಿ, ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ಕನ್ನಡ ಚಲನ ಚಿತ್ರರಂಗದ ದಿಗ್ಗಜ ಶ್ರೀ ಗಿರೀಶ್ ಕಾಸರವಳ್ಳಿಯವರ ಅಮೃತ ಹಸ್ತದಲ್ಲಿ, ಶ್ರೀ ಜಯ ಸಿ.ಸುವರ್ಣರವರ ಅಧ್ಯಕ್ಷತೆಯಲ್ಲಿ ಖ್ಯಾತ ನಿರ್ದೇಶಕರಾದ ಶ್ರೀ ಸದಾನಂದ ಸುವರ್ಣರವರ ಉಪಸ್ಥಿತಿ ಯಲ್ಲಿ ಈ ಸಾಕ್ಷ್ಯಚಿತ್ರದ ಸಿ.ಡಿ.ಯನ್ನು ಬಿಡುಗಡೆಗೊಳಿಸಲಾಯಿತು.

ಯುವವಾಹಿನಿಯ ವತಿಯಿಂದ ನೀಡುವ ವಿದ್ಯಾರ್ಥಿ ವೇತನ ನಮ್ಮ ಸಮಾಜದ ಅರ್ಹ ಬಡ ವಿದ್ಯಾರ್ಥಿಗಳಿಗೆ ಸಿಗಬೇಕು ಹಾಗೂ ಆ ವಿದ್ಯಾರ್ಥಿಗಳ ಸಂಪೂರ್ಣ ಖರ್ಚನ್ನು ವಿದ್ಯಾದಾನಿಗಳ ನೆರವಿನಿಂದ ಯುವವಾಹಿನಿ ಭರಿಸುವುದೆಂದು ತೀರ್ಮಾನಿಸಿ ವಿದ್ಯಾನಿಧಿ ಸಮಿತಿಯೊಂದನ್ನು ರಚಿಸಲಾಗಿದೆ.

ಯುವವಾಹಿನಿಯ ಕಾರ್ಯಕ್ರಮಗಳನ್ನು ಸಮಾಜದ ಜನರಿಗೆ ತಿಳಿಸುವುದಕ್ಕೋಸ್ಕರ ಸಂಪೂರ್ಣ ವಿವರಗಳನ್ನು ಒಳಗೊಂಡ ಒಂದು ಮಾಹಿತಿ ಕೇಂದ್ರ(Web Site)ವನ್ನು ಬಿಡುಗಡೆ ಗೊಳಿಸಲಾಯಿತು.

ಕೇಂದ್ರ ಸಮಿತಿಯ ಸದಸ್ಯರುಗಳು ಹಾಗೂ ಕುಟುಂಬಿಕರಿಗೆ ಉಡುಪಿ ಘಟಕದ ಸಹಯೋಗದೊಂದಿಗೆ ಸೈಂಟ್ ಮೇರಿಸ್‌ಗೆ ನಡೆಸಿದ ಪ್ರವಾಸ ಯಶಸ್ವಿಯಾಗಿ ಮೂಡಿ ಬಂದಿದೆ.

ಮುಲ್ಕಿ ಘಟಕದ ವತಿಯಿಂದ ಯುವ ವೈಭವ 2005, ಉಡುಪಿ ಘಟಕ ವತಿಯಿಂದ ಯುವವಾಹಿನಿ ಟ್ರೋಫಿ 2005 ಕಬಡ್ಡಿ ಕ್ರೀಡಾ ಕೂಟ, ಅವಿಭಜಿತ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ, ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಮಂಗಳೂರು ಘಟಕವು ಕೇಂದ್ರ ಸಮಿತಿಯ ಸಹಯೋಗದೊಂದಿಗೆ ನಡೆಸಿತ್ತು.

ಯಚ್. ಭುಜಂಗ ಮತ್ತು ಯಚ್.ಬಿ.ರಾಜೀವಿರವರ ಸುಪುತ್ರ, ಪತ್ನಿ-ಸವಿತಾ ತಾರಾನಾಥ, ಮಕ್ಕಳು-ಸ್ಪರ್ಶ ತಾರಾನಾಥ ಮತ್ತು ಸವಿಕ್ಷಾ ತಾರಾನಾಥ ಸಿತಾರಾ ಕನ್‌ಸ್ಟ್ರಕ್ಷನ್‌ನ ಮಾಲಕರಾಗಿರುವ ಇವರು ಸಿವಿಲ್ ಇಂಜಿನಿಯರ್. SCDCC Bank Ltd, ಶ್ರೀ ಗೋಕರ್ಣನಾಥ ಕೋ.ಅಪರೇಟಿವ್ ಬ್ಯಾಂಕ್ ಮತ್ತು Mahalakshmi co-op Bankನ Panel Valuer, ಸ್ವರ್ಣ ಸೌಹಾರ್ದ ಕೋ ಅಪರೇಟಿವ್ (ರಿ) ಇದರ ನಿರ್ದೇಶಕರು ಹಾಗೂ ಯುವವಾಹಿನಿ(ರಿ) ಹೆಜಮಾಡಿ ಘಟಕದ ಸದಸ್ಯ, ಅಧ್ಯಕ್ಷರಾಗಿ, ಕೇಂದ್ರ ಸಮಿತಿಯ ವಿವಿಧ ಹುದ್ದೆಗಳನ್ನು ನಿಭಾಯಿಸಿ 2005-06 ರ ಸಾಲಿನ ಅಧ್ಯಕ್ಷ ಪ್ರಸ್ತುತ ವಿದ್ಯಾನಿಧಿ ಸಮಿತಿಯ ಕಾರ್ಯದರ್ಶಿ.

ವಿಳಾಸ : ಸಿತಾರಾ ಕನ್‌ಸ್ಟ್ರಕ್ಷನ್, ಕೋಟೆ ಕಾಂಪ್ಲೆಕ್ಸ್, ಹೆಜಮಾಡಿ, ಉಡುಪಿ ಜಿಲ್ಲೆ – 574 103
ಮೊಬೈಲ್: 9845010239

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!