Yuvavahini

JAN 05, 2026 5.41 PM IST

ಯುವಸಿಂಚನ–ಜಾಲತಾಣ: ಒಂದು ವರ್ಷದ ಸೃಜನಶೀಲ ಸಾಗಣೆಗೆ ಮುನ್ನೋಟ

ಪದಗಳ ಪಯಣಕ್ಕೆ ದಿಕ್ಕು ತೋರಿದ ಮೊದಲ ಹೆಜ್ಜೆ

ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕ ಮಂಡಳಿಯ 2025–26ನೇ ಸಾಲಿನ ಪ್ರಥಮ ಸಭೆಯು 2026ರ ಜನವರಿ 5ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಒಂದು ವರ್ಷದ ಪತ್ರಿಕಾ ಹಾಗೂ ಜಾಲತಾಣ ಕಾರ್ಯಚಟುವಟಿಕೆಗಳು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಚಿಂತನೆ, ಚರ್ಚೆ ಮತ್ತು ನಿರ್ಧಾರಗಳೊಂದಿಗೆ ಸಭೆ ಅರ್ಥಪೂರ್ಣವಾಗಿ ಜರುಗಿತು.

35 ಘಟಕಗಳನ್ನು ಹೊಂದಿರುವ ಯುವವಾಹಿನಿ ಸಂಸ್ಥೆಯ ಪ್ರತಿಯೊಂದು ಘಟಕದ ಚಟುವಟಿಕೆಗಳಿಗೂ ಸಮಾನ ಪ್ರಚಾರ ದೊರಕಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದ ಕೇಂದ್ರ ಸಮಿತಿಯ ಅಧ್ಯಕ್ಷ ಹಾಗೂ ಗೌರವ ಸಂಪಾದಕ ಅಶೋಕ್ ಕುಮಾರ್ ಪಡ್ಪು, ನವಿಲಿನ ನಾಟ್ಯದಂತೆ ದೊಡ್ಡ ವೇದಿಕೆಗಳಿಗೂ, ಪ್ರತಿ ಘಟಕದ ಶ್ರಮ ಮತ್ತು ಸಾಧನೆಗಳಿಗೂ ಸಮಾನ ಮಹತ್ವ ನೀಡಬೇಕು. ಸಮಾನತೆಯೇ ಸಂಘಟನೆಯ ಸೌಂದರ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಶೋಕ್ ಕುಮಾರ್ ಪಡ್ಪು ಗೌರವ ಸಂಪಾದಕರು
ಅಶೋಕ್ ಕುಮಾರ್ ಪಡ್ಪು, ಗೌರವ ಸಂಪಾದಕರು

ಘಟಕಗಳಿಂದ ಯುವಸಿಂಚನ ಪತ್ರಿಕೆ ಹಾಗೂ ಜಾಲತಾಣಕ್ಕೆ ಬರುವ ವರದಿಗಳು ಕೇವಲ ಮಾಹಿತಿ ನೀಡುವಂತಲ್ಲ, ಓದುಗರನ್ನು ಸೆಳೆಯುವಂತೆ ಜೀವಂತವಾಗಿರಬೇಕು. ಸಂಪಾದಕ ಮಂಡಳಿಯ ಪ್ರತಿಯೊಬ್ಬ ಸದಸ್ಯರೂ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದಾಗಲೇ ಈ ವರ್ಷದ ಸಂಪಾದಕ ಮಂಡಳಿ ಮಾದರಿಯಾಗುತ್ತದೆ ಎಂದು ಸಾಮಾಜಿಕ ಜಾಲತಾಣ ಸಂಪಾದಕ ರಾಜೇಶ್ ಸುವರ್ಣ ಮನವಿ ಮಾಡಿದರು.

ಹರೀಶ್ ಪಚ್ಚನಾಡಿ ಕಾರ್ಯನಿರ್ವಾಹಕ ಸಂಪಾದಕರು ಯುವಸಿಂಚನ
ಹರೀಶ್ ಪಚ್ಚನಾಡಿ, ಕಾರ್ಯನಿರ್ವಾಹಕ ಸಂಪಾದಕರು ಯುವಸಿಂಚನ

ಸಭೆಯಲ್ಲಿ, ವೈಚಾರಿಕ ಲೇಖನಗಳೊಂದಿಗೆ ಯುವಸಿಂಚನ ಪತ್ರಿಕೆಗೆ ಹೊಸತನದ ಸ್ಪರ್ಶ ನೀಡುವುದು, ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಾ ಘಟಕಗಳ ಕಾರ್ಯಚಟುವಟಿಕೆಗಳ ವರದಿಗಳು ಕ್ಷಿಪ್ರವಾಗಿ ಪ್ರಕಟವಾಗುವಂತೆ ವ್ಯವಸ್ಥೆ ರೂಪಿಸುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.

ಚೈತ್ರಾ ಕಬ್ಬಿನಾಲೆ, ಪತ್ರಿಕಾ ಕಾರ್ಯದರ್ಶಿ, ಯುವಸಿಂಚನ
ಚೈತ್ರಾ ಕಬ್ಬಿನಾಲೆ, ಪತ್ರಿಕಾ ಕಾರ್ಯದರ್ಶಿ, ಯುವಸಿಂಚನ
ಲತೀಶ್ ಸಂಕೊಳಿಗೆ, ಸದಸ್ಯರು, ಯುವಸಿಂಚನ ಸಂಪಾದಕ  ಮಂಡಳಿ
ಲತೀಶ್ ಸಂಕೊಳಿಗೆ, ಸದಸ್ಯರು, ಯುವಸಿಂಚನ ಸಂಪಾದಕ ಮಂಡಳಿ

ಈ ಸಭೆಯಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾಲತಾ, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ ಹಾಗೂ ಯುವಸಿಂಚನ ಮತ್ತು ಸಾಮಾಜಿಕ ಜಾಲತಾಣ ಸಂಪಾದಕ ಮಂಡಳಿಯ ಸದಸ್ಯರಾದ ಭವಾನಿ ಕೆ ಮತ್ತು ಲತೀಶ್ ಎಂ ಸಂಕೋಳಿಗೆ ಉಪಸ್ಥಿತರಿದ್ದರು.

ರಾಜೇಶ್ ಸುವರ್ಣ ಸಂಪಾದಕರು ಸಾಮಾಜಿಕ ಜಾಲತಾಣ
ರಾಜೇಶ್ ಸುವರ್ಣ, ಸಂಪಾದಕರು ಸಾಮಾಜಿಕ ಜಾಲತಾಣ

ಯುವಸಿಂಚನ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಹರೀಶ್ ವಿ. ಪಚ್ಚನಾಡಿ ಸ್ವಾಗತಿಸಿ, ಸಂಪಾದಕ ಮಂಡಳಿಯ ಸದಸ್ಯೆ ಉಷಾ ಕೆ ಧನ್ಯವಾದ ಸಲ್ಲಿಸಿದರು.

ಶಿವಪ್ರಸಾದ್, ಸದಸ್ಯರು ಸಂಪಾದಕ ಮಂಡಳಿ
ಶಿವಪ್ರಸಾದ್, ಸದಸ್ಯರು ಸಂಪಾದಕ ಮಂಡಳಿ
ಭವಾನಿ ಕೆ, ಸದಸ್ಯರು ಸಂಪಾದಕ ಮಂಡಳಿ
ಉಷಾ ಕೆ, ಸದಸ್ಯರು ಸಂಪಾದಕ ಮಂಡಳಿ
ಆದರ್ಶ್ ಸುವರ್ಣ, ಸದಸ್ಯರು, ಸಂಪಾದಕ ಮಂಡಲಿ
ಆದರ್ಶ್ ಸುವರ್ಣ, ಸದಸ್ಯರು, ಸಂಪಾದಕ ಮಂಡಲಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!