Yuvavahini

AUG 05, 2007 10.59 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ನೇಮಿರಾಜ್ ಪಿ. – ಅಧ್ಯಕ್ಷರು -2006-07

ಮಂಗಳೂರಿನ ಮರೋಳಿ ಕುಲಶೇಖರ ನಿವಾಸಿಯಾಗಿರುವ ನೇಮಿರಾಜ್ ಓರ್ವ ಉತ್ತಮ ಸಂಘಟಕರು, ಕಲಾಪೋಷಕರಾಗಿ ಬೆಳೆದವರು. ನಾಯಕತ್ವ ಗುಣವನ್ನು ತನ್ನೊಡಲಲ್ಲೇ ತುಂಬಿಕೊಂಡು ಬಂದಿರುವಂತಹ ಶ್ರೀಯುತರು ಯುವವಾಹಿನಿಯ ಸ್ಥಾಪಕ ಸದಸ್ಯರಾಗಿರುವುದರೊಂದಿಗೆ ಪ್ರತಿಯೊಂದು ಕಾರ್ಯಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಶ್ರೀಯುತರು 2004ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಕೇಂದ್ರ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ 2006-07ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ.

’ಜೈ ಭಾರತ್‌ಮಾತಾ ಎಜುಕೇಶನ್ ಸೊಸೈಟಿ, ಮಂಡ್ಯ’ ಇದರ ಅಧ್ಯಕ್ಷರಾಗಿ, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘ (ರಿ) ಮಂಗಳೂರು ಇದರ ಉಪಾಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಮಂಗಳೂರು ಇದರ ಸದಸ್ಯರಾಗಿ, ವೀಣಾಪಾಣಿ ಎಜುಕೇಶನ್ ಟ್ರಸ್ಟ್(ರಿ) ಮಂಗಳೂರು ಇದರ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸಕ್ತ “ಕಂಪ್ಯೂಟ್ರಾಕ್ಸ್ ಸರ್ವಿಸ್” ಮಂಗಳೂರು ಇದರ ನಿರ್ದೇಶಕರಾಗಿದ್ದಾರೆ. ಪತ್ನಿ ಶ್ರೀಮತಿ ಪ್ರತಿಭಾ ನೇಮಿರಾಜ್ ಸ್ನಾತಕೋತ್ತರ ಪದವೀಧರೆಯಾಗಿದ್ದು ಎಂ.ಫಿಲ್ ಪದವಿ ಪಡೆದಿರುತ್ತಾರೆ. ಪ್ರಸಕ್ತ ಎಂ.ಬಿ.ಎ. ಅಭ್ಯಾಸ ಮಾಡುತ್ತಿರುವ ಇವರು ಮಂಗಳೂರಿನ ಆದರ್ಶ ಕಾಲೇಜಿನ ಅಧ್ಯಕ್ಷರಾಗಿರುವರು. ಪುತ್ರಿ ನೇಹಲ್ ಮಂಗಳೂರು ಲೂರ್ಡ್ಸ್ ಪದವಿಪೂರ್ವ ಕಾಲೇಜಿನಲ್ಲಿ I PUC ವಿದ್ಯಾರ್ಥಿನಿಯಾಗಿದ್ದು, ಅಂತರ್‌ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಪಟುವಾಗಿರುವ ಬಹುಮುಖ ಪ್ರತಿಭಾವಂತೆ. ಕೂಚಿಪುಡಿ ನೃತ್ಯವನ್ನು ಸ್ಕೇಟಿಂಗ್‌ಗೆ ಅಳವಡಿಸಿ ಪ್ರಸ್ತುತ ಪಡಿಸುವ ಅಪೂರ್ವ ಕಲಾವಿದೆ.

ನೇಮಿರಾಜರ ಅಧ್ಯಕ್ಷ ಅವಧಿಯಲ್ಲಿ ಜರುಗಿದ ಚಟುವಟಿಕೆಗಳು: ವಿದ್ಯೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಮಾಜದ ದಾನಿಗಳಿಂದ ಸಂಗ್ರಹಿಸಿದ ಮತ್ತು ಬಿಲ್ಲವಾಸ್ ದುಬಾಐ ವತಿಯಿಂದ ಕೊಡಲ್ಪಟ್ಟ ದೇಣಿಗೆಗಳನ್ನು ಸಮಾಜದ ಅರ್ಹ ಬಡ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ವಿವಿಧ ಘಟಕಗಳ ಮುಖಾಂತರವೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿಯ ಸಹಾಯ ಧನವನ್ನು ವಿತರಿಸಲಾಯಿತು. ಯುವಜನತೆಗಾಗಿ ಉಡುಪಿಯ ತರಬೇತಿ ಸಂಸ್ಥೆ ಮತ್ತು ಸ್ವ- ಉದ್ಯೋಗ ಮಾಹಿತಿ ಕೇಂದ್ರದ ವತಿಯಿಂದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಮಟ್ಟದ ಗುರು ಸಂದೇಶ ಜಾಥಾದಲ್ಲಿ ಯುವವಾಹಿನಿ ಸಕ್ರಿಯವಾಗಿ ಭಾಗವಹಿಸಿ ಜಾಥಾ ಮತ್ತು ಸಮಾವೇಶ ಯಶಸ್ವಿಯಾಗುವಲ್ಲಿ ಸಹಕರಿಸಿದೆ.

ವಿಳಾಸ : ತೇಜೋಗ್ರಹ, ಲಾಲ್‌ಬಹದ್ದೂರು ಶಾಸ್ತ್ರಿ ನಗರ, ಕುಲಶೇಖರ ಅಂಚೆ, ಮರೋಳಿ, ಮಂಗಳೂರು – 575005 ಮೊಬೈಲ್: 9448132243

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!