ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ

ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ಪೂಜ್ಯ ನಾರಾಯಣ ಗುರುಗಳು ರಚಿಸಿದ “ದೈವ ದಶಕಂ” ಕೃತಿಯ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಸದಸ್ಯರು ಭಾಗವಹಿಸಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರ ಮತ್ತು ಧರ್ಮಸಂದೇಶ ನಡೆಯಿತು. ಕಾರ್ಯಕ್ರಮವು ಭಕ್ತಿಭಾವ ವಾತಾವರಣದಲ್ಲಿ ನೆರವೇರಿತು.


