ಪುತ್ತೂರು:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ, ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಶಿರೂರು ಮಠದ ವೇದವರ್ಧನ ಶ್ರೀಪಾದರು ಅವರಿಗೆ ಆಯೋಜಿಸಲಾದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ, ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು.

ಗಣ್ಯರ ಸಮ್ಮುಖದಲ್ಲಿ ನಡೆದ ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಹಾಗೂ ಘಟಕದ ಪದಾಧಿಕಾರಿಗಳು ಭಾಗವಹಿಸಿ, ಶ್ರೀಪಾದರಿಗೆ ಗೌರವ ಸಮರ್ಪಿಸಿ ಆಶೀರ್ವಾದವನ್ನು ಪಡೆದುಕೊಂಡರು. ಈ ಗೌರವ ಸಮರ್ಪಣೆ ಕಾರ್ಯಕ್ರಮವು ಧಾರ್ಮಿಕ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳು ಹಾಗೂ ಯುವವಾಹಿನಿಯ ಸೇವಾ ಮನೋಭಾವವನ್ನು ಪ್ರತಿಬಿಂಬಿಸಿತು


