ಮಂಗಳೂರು: ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಉತ್ಸವದ ಅಂಗವಾಗಿ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಶಕ್ತಿ ನಗರ ಘಟಕದ ಸದಸ್ಯರಿಂದ ಸ್ವಯಂಸೇವಾ ಕಾರ್ಯ ನಡೆಯಿತು.

ಜಾತ್ರೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸ್ವಚ್ಛತೆ, ಶಿಸ್ತು ಹಾಗೂ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸೇವೆಯೇ ಸಾಧನೆ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಶಕ್ತಿ ನಗರ ಘಟಕದ ಸದಸ್ಯರು ಸಮಾಜಮುಖಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸ್ವಯಂಸೇವಾ ಕಾರ್ಯವು ಯುವವಾಹಿನಿಯ ಸಂಘಟನಾ ಶಕ್ತಿ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಪ್ರತಿಬಿಂಬಿಸಿತು.


