ಮಂಗಳೂರು : ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಆನ್ಲೈನ್ ವಂಚನೆಗಳು, ಸೈಬರ್ ಅಪರಾಧಗಳ ವಿಧಗಳು ಮತ್ತು ಅವುಗಳಿಂದ ರಕ್ಷಿಸಿಕೊಳ್ಳುವ ಮಾರ್ಗಗಳ ಬಗ್ಗೆ ನಾವು ಜಾಗ್ರತರಾಗಬೇಕಿದೆ. ನಶೆಯ ದುಷ್ಪರಿಣಾಮಗಳು ಹಾಗೂ ನಶಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರದ ಮಹತ್ವವನ್ನು ತಿಳಿಯಬೇಕಿದೆ. ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಹಾಗೂ ಆರೋಗ್ಯಕರ ಸಮಾಜದ ಮೂಲಮಂತ್ರವೆಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ತಿಪ್ಪಾ ರೆಡ್ಡಿ ಇವರು ತಿಳಿಸಿದರು.

ಅವರು ದಿನಾಂಕ 10.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಕಟದ ಆಶ್ರಯದಲ್ಲಿ ಬಿಲ್ಲವ ಬ್ರಿಗೇಡ್ (ರಿ.) ಮಂಗಳೂರು ಇದರ ಸಹಯೋಗದೊಂದಿಗೆ ನಡೆದ ಸೈಬರ್ ಕ್ರೈಂ ಅವರ್ನಸ್ ಹಾಗೂ ನಶೆಮುಕ್ತ ಮಂಗಳೂರು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಮಂಗಳೂರು ಬಿಲ್ಲವ ಬ್ರಿಗೇಡ್ (ರಿ.) ಸಂಸ್ಥಾಪಕರಾದ ಹಾಗೂ ನಂದಾದೀಪ ಫೌಂಡೇಶನ್ ಅಧ್ಯಕ್ಷರಾದ ಸದಾನಂದ ಪೂಜಾರಿ ಕಾರ್ಯಗಾರ ಉದ್ಘಾಟಿಸಿದರು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮಹೇಶ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ರಘುರಾಜ್ ಕದ್ರಿ, ಪೋಲಿಸ್ ಅಧಿಕಾರಿ ಸುರೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಶ್ರೀ ಗೋಕರ್ಣನಾಥೇಶ್ವರ ಕಾಲೇಜ್ , ಬೆಸೆಂಟ್ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದ ಶಾಲೆ ಮಂಗಳೂರು ಇದರ ಒಟ್ಟು 95 ವಿದ್ಯಾರ್ಥಿಗಳು ಬಾಗವಹಿದ್ದರು. ಗೋಕರ್ಣನಾಥೇಶ್ವರ ಕಾಲೇಜಿನ ಉಪನ್ಯಾಸಕರಾದ ಭಾರತಿ, ದಿವ್ಯಾ, ಬೆಸೆಂಟ್ ವಿದ್ಯಾ ಸಂಸ್ಥೆಯ ಶಿಕ್ಷಕಿ ಮಮತಾ, ರಾಜೇಶ್ವರಿ ಉಪಸ್ಥಿತರಿದ್ದರು ಘಟಕದ ಕೋಶಾಧಿಕಾರಿ ಜಯಲಕ್ಷ್ಮಿ ಬಾಲಕೃಷ್ಣ ಪ್ರಾರ್ಥಿಸಿದರು ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮಣಿ ಉಮೇಶ್ ವಂದಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರೇಖಾಲತಾ ಕಾರ್ಯಕ್ರಮ ನಿರೂಪಿಸಿದರು.


