ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 18.01.2026ರಂದು ಮುಂಜಾನೆ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮಸ್ಕರಿಸಿ ಒಂದು ದಿನದ ಕಿರುಪ್ರವಾಸವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಸುಜಾತ ನವೀನ್, ಕಾರ್ಯದರ್ಶಿಗಳಾದ ಚರಣ್ ರಾಜ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ಅವರು ಪ್ರವಾಸದ ಮುಂದಾಳತ್ವವನ್ನು ವಹಿಸಿದ್ದರು.

ಸುಮಾರು 40 ಮಂದಿ ಸದಸ್ಯರು ಭಾಗವಹಿಸಿದ ಈ ಕ್ಷೇತ್ರ ದರ್ಶನದಲ್ಲಿ ಮೊದಲಿಗೆ ಶ್ರೀ ಕ್ಷೇತ್ರ ಕಲಶೇಶ್ವರ ದೇವಾಲಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಾಯಿತು. ನಂತರ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಹೊರನಾಡುಗೆ ತೆರಳಿ ದೇವಿಯ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಲಾಯಿತು. ಬಳಿಕ ದಿವ್ಯಕ್ಷೇತ್ರ ಹರಿಹರಪುರ ಮಠ ಹಾಗೂ ಶೃಂಗೇರಿ ಶ್ರೀ ಶಾರದಾ ದೇವಾಲಯ ದರ್ಶನ ಪಡೆದು ಪೂಜೆ ಸಲ್ಲಿಸಿ ರಾತ್ರಿಯ ಅನ್ನಪ್ರಸಾದವನ್ನು ಸ್ವೀಕರಿಸಲಾಯಿತು.
ಪ್ರವಾಸದ ದಾರಿಮಧ್ಯೆ ಬಸ್ಸಿನಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಲ್ಲದೆ ಭಾಗವಹಿಸಿದ ಎಲ್ಲ ಸದಸ್ಯರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಸದಸ್ಯರು ಪರಸ್ಪರ ಪ್ರವಾಸದ ಅನುಭವಗಳನ್ನು ಹಂಚಿಕೊಂಡು ಸಂತಸದಿಂದ ಪ್ರವಾಸವನ್ನು ಮುಗಿಸಿ ಸಂಜೆ ಸುರಕ್ಷಿತವಾಗಿ ತಮ್ಮ ತಮ್ಮ ಮನೆಗಳಿಗೆ ಮರಳಿದರು.


