ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ ಆಶ್ರಯದಲ್ಲಿ ದಿನಾಂಕ 29/01/2026ರಂದು ಕೋಟೆ ಅಂಗನವಾಡಿ ಕೇಂದ್ರದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಬ್ರಹ್ಮಶ್ರೀ ನಾರಾಯಣಗುರುಗಳ ಸ್ಮರಣೆಯೊಂದಿಗೆ, ಘಟಕದ ಪೂರ್ವ ಅಧ್ಯಕ್ಷರಾದ ವಾಮನ್ ಪೂಜಾರಿ ಅವರು ಪ್ರಾರ್ಥನೆಯ ಮೂಲಕ ಸಮಾರಂಭಕ್ಕೆ ಭಕ್ತಿಭಾವದ ಮುನ್ನುಡಿ ನೀಡಿದರು. ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಮೀಳಾ ಜತ್ತನ್ ಹಾಗೂ ಕೋಟೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ದಯಾನಂದ ಬಂಗೇರ ಅವರು ಉದ್ಘಾಟಿಸಿದರು.
ಯುವವಾಹಿನಿ (ರಿ.) ಕಟಪಾಡಿ ಘಟಕದ ಅಧ್ಯಕ್ಷರಾದ ಸುಶಾಂತ್ ಕೋಟ್ಯಾನ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಸುನೀತ, ಉಪಾಧ್ಯಕ್ಷ ಯೋಗೇಶ್ ಸಿ.ಹೆಚ್., ಸನತ್ ಶೆಟ್ಟಿ, ಅಂಗನವಾಡಿ ಶಿಕ್ಷಕಿ ಫಿಲೋನಿನಾ, ಯುವವಾಹಿನಿ ಕಟಪಾಡಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಕಾರ್ಯದರ್ಶಿ ಲಕ್ಷ್ಮೀ ಅವರು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.


