Yuvavahini

FEB 01, 2026 9.00 PM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ "ಬಿಲ್ಲವ ಪ್ರೀಮಿಯರ್ ಲೀಗ್ (BPL) - 2026"

ಕ್ರೀಡಾಂಗಣದಲ್ಲಿ ಮಹಿಳಾ ಶಕ್ತಿ : ಯುವವಾಹಿನಿಯ ಸಾಧನೆಗೆ ಸಮಾಜದ ಮೆಚ್ಚುಗೆ

ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ.

ಫೈನಲ್ ಪಂದ್ಯಾಟದಲ್ಲಿ ಬಲಿಷ್ಠ ದುಬೈ ವಾರಿಯರ್ಸ್‌ ತಂಡವು ಕ್ವೀನ್ ಇಲೆವೆನ್ ಕುವೈಟ್‌ ಎ ತಂಡವನ್ನು ಐದು ರನ್ ಗಳಿಂದ ಸೋಲಿಸಿ ಬಿಲ್ಲವ ಪ್ರೀಮಿಯರ್‌ ಲೀಗ್‌‌2026 ಟ್ರೋಫಿ ಸಹಿತ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಪಡೆಯಿತು.

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು.

ಕ್ವೀನ್ ಇಲೆವೆನ್ ಕುವೈಟ್‌ ಎ ತಂಡವು ದ್ವಿತೀಯ ಟ್ರೋಫಿ ಸಹಿತ ಐವತ್ತು ಸಾವಿರ ರೂಪಾಯಿ ನಗದು ಪಡೆಯಿತು.

ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ ಪಂದ್ಯಕೂಟವು ಕರಾವಳಿ ವಲಯದಲ್ಲಿ ಪ್ರಥಮ ಬಾರಿಗೆ ಇಂತಹ ವಿಶಿಷ್ಟ ಪ್ರಯತ್ನಕ್ಕೆ ಸಾಕ್ಷಿಯಾಯಿತು. ಕ್ರೀಡಾಂಗಣದಲ್ಲಿ ಉತ್ಸಾಹಭರಿತವಾಗಿ ಆಡಿದ ಮಹಿಳಾ ಕ್ರೀಡಾಪಟುಗಳು, ತಮ್ಮ ಆಟದ ಮೂಲಕ ಆತ್ಮವಿಶ್ವಾಸ, ಶಿಸ್ತು ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಮುನ್ನಡೆಯಬಲ್ಲರು ಎಂಬುದನ್ನು ಈ ಪಂದ್ಯಾಟ ಸ್ಪಷ್ಟವಾಗಿ ತೋರಿಸಿತು.

ಅದ್ಧೂರಿ ಸಮಾರೋಪ ಸಮಾರಂಭ
ದಿ| ಪಿ. ಕೆ. ದೂಜಪೂಜಾರಿ ವೇದಿಕೆಯಲ್ಲಿ ಭಾನುವಾರ ಸಂಜೆ ನಡೆದ ಪಂದ್ಯಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪಡುಬಿದ್ರಿ ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರ ವೃತ್ತಿಪರ ಮಾದರಿಯ ಭಾಗವಹಿಸುವಿಕೆ ಹೆಮ್ಮೆಯ ವಿಷಯವಾಗಿದ್ದು, ಯುವವಾಹಿನಿಯ ಈ ಪ್ರಯತ್ನ ಶ್ಲಾಘನೀಯ ಎಂದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕ್ರೀಡಾಪಟುಗಳನ್ನು ಅಭಿನಂದಿಸಿ ಯುವವಾಹಿನಿಯಿಂದ ಮುಂದೆಯೂ ಇಂತಹ ವಿನೂತನ ಕಾರ್ಯಕ್ರಮಗಳು ನಡೆಯಲಿ ಎಂದು ಶುಭ ಹಾರೈಸಿದರು.

ಹೆಜಮಾಡಿ ಬಿಲ್ಲವಾಸ್ ತಂಡವು ತೃತೀಯ ಸ್ಥಾನಿಯಾಗಿ ಟ್ರೋಫಿ ಸಹಿತ ಇಪ್ಪತೈದು ಸಾವಿರ ಪಡೆಯಿತು.

ಕಾರ್ಯಕ್ರಮದ ವೇಳೆ ಮಾತನಾಡಿದ ಗಣ್ಯರು, ಮಹಿಳಾ ಕ್ರಿಕೆಟ್‌ ಆಯೋಜನೆಯ ಮೂಲಕ ಯುವವಾಹಿನಿ ಸಮಾಜಕ್ಕೆ ಅತ್ಯಂತ ಸಕಾರಾತ್ಮಕ ಸಂದೇಶವನ್ನು ನೀಡಿದೆ ಎಂದು ಪ್ರಶಂಸಿಸಿದರು. ಇಂತಹ ವೇದಿಕೆಗಳು ಮಹಿಳೆಯರೊಳಗಿನ ಪ್ರತಿಭೆಯನ್ನು ಹೊರತರಲು, ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ಒದಗಿಸಲು ಸಹಕಾರಿಯಾಗುತ್ತವೆ. ಯುವವಾಹಿನಿಯ ಈ ಪ್ರಯತ್ನವು ಯುವ ಸಮುದಾಯಕ್ಕೆ ಪ್ರೇರಣೆಯಾಗಿ, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.
ಕ್ರೀಡೆ ಮೂಲಕ ಮಹಿಳೆಯರನ್ನು ಒಗ್ಗೂಡಿಸಿ, ಸಮಾಜದ ಗಮನವನ್ನು ಅವರ ಸಾಮರ್ಥ್ಯದತ್ತ ಸೆಳೆದಿರುವುದು ಯುವವಾಹಿನಿಯ ಸಾಮಾಜಿಕ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ದುಬೈ ವಾರಿಯರ್ಸ್‌ ಚಾಂಪಿಯನ್
ಫೈನಲ್ ಪಂದ್ಯಾಟದಲ್ಲಿ ಬಲಿಷ್ಠ ದುಬೈ ವಾರಿಯರ್ಸ್‌ ತಂಡವು ಕ್ವೀನ್ ಇಲೆವೆನ್ ಕುವೈಟ್‌ ಎ ತಂಡವನ್ನು ಐದು ರನ್ ಗಳಿಂದ ಸೋಲಿಸಿ ಬಿಲ್ಲವ ಪ್ರೀಮಿಯರ್‌ ಲೀಗ್‌‌2026 ಟ್ರೋಫಿ ಸಹಿತ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಪಡೆಯಿತು.
ಕ್ವೀನ್ ಇಲೆವೆನ್ ಕುವೈಟ್‌ ಎ ತಂಡವು ದ್ವಿತೀಯ ಟ್ರೋಫಿ ಸಹಿತ ಐವತ್ತು ಸಾವಿರ ರೂಪಾಯಿ ನಗದು ಪಡೆಯಿತು.
ಹೆಜಮಾಡಿ ಬಿಲ್ಲವಾಸ್ ತಂಡವು ತೃತೀಯ ಸ್ಥಾನಿಯಾಗಿ ಟ್ರೋಫಿ ಸಹಿತ ಇಪ್ಪತೈದು ಸಾವಿರ ಪಡೆಯಿತು.

ವೈಯಕ್ತಿಕ ಪ್ರಶಸ್ತಿ
ಸರಣಿ ಶ್ರೇಷ್ಠ ಪ್ರಶಸ್ತಿ ಸಹಿತ ರೂಪಾಯಿ ಇಪ್ಪತ್ತು ಸಾವಿರ ನಗದನ್ನು ಕ್ವೀನ್ ಇಲೆವೆನ್ ಎ ತಂಡದ ರಿಂಕು ಪಡೆದರೆ, ಅತ್ಯುತ್ತಮ ಬೌಲರ್ ಆಗಿ ದುಬೈ ವಾರಿಯರ್ಸ್‌ ನ ಅನಿತಾ ನಗದು ಹತ್ತು ಸಾವಿರ ಪಡೆದರು ಹಾಗೂ ಅತ್ಯುತ್ತಮ ಬ್ಯಾಟರ್ ಆಗಿ ದುಬೈ ವಾರಿಯರ್ಸ್‌ ನ ಚೈತ್ರಾ ನಗದು ಹತ್ತು ಸಾವಿರ ಪಡೆದರು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಕ್ರೀಡಾ ಕ್ಷೇತ್ರದ ಸಾಧಕರಾದ ಧನಲಕ್ಷ್ಮಿ ಪೂಜಾರಿ, ಚಂದು ವೆಂಕಟೇಶಪ್ಪ, ದೀಪಿಕಾ ಆರ್ ಅಮೀನ್., ಮೋನಿಷಾ ಎನ್ ಎಸ್ ಅಮೀನ್ ಅವರನ್ನು ಸನ್ಮಾನಿಸಲಾಯಿತು.

ಪಂದ್ಯಾಕೂಟದ ಯಶಸ್ಸಿಗೆ ವಿಶೇಷವಾಗಿ ಸಹಕರಿಸಿದ ಶ್ರೀಮತಿ ಶ್ವೇತಾ ಕೋಟ್ಯಾನ್ ಕುವೈಟ್‌ ಹಾಗೂ ಶ್ರೀಮತಿ ಸುಷ್ಮಾ ಅರುಣ್ ಇವರನ್ನು ಘಟಕದ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ವೈದ್ಯಕೀಯ ಕ್ಷೇತ್ರದ ಡಾ. ಪಿ.ಕೆ. ಕಿರಣ್ ಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹಾಗೂ ಮುಂಬೈ ಬಿಜೆಪಿ ದಕ್ಷಿಣ ಭಾರತ ಘಟಕದ ಪ್ರಧಾನ ಕಾರ್ಯದರ್ಶಿ ಸದಾನಂದ ಪೂಜಾರಿ ಮಾದುಮನೆ, ಉದ್ಯಮಿ ಗಣೇಶ್ ಗುಜರಾನ್, ಎ. ನಾರಾಯಣ ಪೂಜಾರಿ ಹೊಸಪೇಟೆ, ಪಡುಬಿದ್ರಿ ಬಿಲ್ಲವ ಸಮಾಜ ಸೇವಾಸಂಘ ದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿ ರೇಖಲತಾ, ಅಶೋಕ್ ಪೂಜಾರಿ ಹೊಸಪೇಟೆ, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವಾಮನ್ ಕೋಟ್ಯಾನ್ ನಡಿಕುದ್ರು, ಪ್ರಭೋದಚಂದ್ರ ಹೆಜಮಾಡಿ, ಲೋಕೇಶ್ ಅಮೀನ್ ಹೆಜಮಾಡಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅತಿಥಿಗಳಾಗಿ ಭಾಗವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಸಾಕ್ಷಿಯಾದರು. ಘಟಕದ ಕಾರ್ಯದರ್ಶಿ ಭಾಸ್ಕರ್ ಎನ್. ಅಂಚನ್ ವಂದಿಸಿದರು. ಕ್ರೀಡಾ ನಿರ್ದೇಶಕ ಶ್ರವಣ್ ಕುಮಾರ್ ಉಪಸ್ಥಿತರಿದ್ದರು.

ನೂರಾರು ಕ್ರೀಡಾಭಿಮಾನಿಗಳು ಮತ್ತು ಸಮುದಾಯದ ಬಾಂಧವರು ಈ ಐತಿಹಾಸಿಕ ಪಂದ್ಯಾಟಕ್ಕೆ ಸಾಕ್ಷಿಯಾದರು. ಮಹಿಳಾ ಕ್ರೀಡಾಪಟುಗಳ ಸ್ಪೂರ್ತಿಯುತ ಭಾಗವಹಿಸುವಿಕೆ ಹಾಗೂ ಸಂಘಟಕರ ಶಿಸ್ತಿನ ನಿರ್ವಹಣೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಸಮಾಜದ ವಿವಿಧ ವಲಯಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!