Yuvavahini

FEB 04, 2026 11.00 AM IST

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಯುವವಾಹಿನಿಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣದ ಶಿಲಾನ್ಯಾಸ

ಮೂಡುಬಿದಿರೆ : ಸೇವೆಯೇ ಧರ್ಮ ಎಂಬ ತತ್ವವನ್ನು ಕಾರ್ಯರೂಪಕ್ಕೆ ತಂದು, ಯುವವಾಹಿನಿ (ರಿ.) ಮೂಡುಬಿದಿರೆ ಘಟಕವು ಮಾನವೀಯತೆಯ ಮೌಲ್ಯವನ್ನು ಮತ್ತೊಮ್ಮೆ ಪ್ರತಿಪಾದಿಸಿದೆ. ಮೂಡುಮಾರ್ನಾಡು ಗ್ರಾಮದ ಸುಮಿತ್ರಾ–ವಿಶ್ವನಾಥ್ ದಂಪತಿಯ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯನ್ನು ಮರುನಿರ್ಮಿಸಲು ಸುಮಾರು 6 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿ, ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಸುಮಾರು 600 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣದ ಮೂಲಕ ಅಶಕ್ತ ಕುಟುಂಬಕ್ಕೆ ಭದ್ರ ಆಶ್ರಯ ಕಲ್ಪಿಸುವ ಸಂಕಲ್ಪವನ್ನು ಘಟಕ ಕೈಗೊಂಡಿದೆ.

ಯುವವಾಹಿನಿಯ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕರಾದ ಶಂಕರ್ ಎ. ಕೋಟ್ಯಾನ್ ಅವರು ಮಾತನಾಡಿ, ಯುವವಾಹಿನಿಯ ಸಕ್ರಿಯ ಸದಸ್ಯೆಯಾಗಿರುವ ಸುಮಿತ್ರಾ ಅವರ ಮನೆ ದುಸ್ಥಿತಿಯಲ್ಲಿರುವುದನ್ನು ಗಮನಿಸಿ ಮರುನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಮಾಜದ ಬೆಂಬಲದೊಂದಿಗೆ ಈ ಮನೆ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಕುಟುಂಬಕ್ಕೆ ಸುರಕ್ಷಿತ ನೆಲೆ ಒದಗಿಸುವುದು ನಮ್ಮ ಧ್ಯೇಯ ಎಂದು ತಿಳಿಸಿದರು.

ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಮುರಳೀಧರ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಸುದೇವ ಭಟ್ ಅವರು ಪ್ರಾರ್ಥನೆ ಸಲ್ಲಿಸಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಮಾರ್ನಾಡು ಗ್ರಾ.ಪಂ.ಸದಸ್ಯರಾದ ರಮೇಶ್ ಶೆಟ್ಟಿ ಅವರು ರೂ.10,000 ಹಾಗೂ ಹಿರಿಯರಾದ ಮೋಹನ್ ಕೋಟ್ಯಾನ್ ಅವರು ರೂ.3,000 ದೇಣಿಗೆ ನೀಡಿ ಕಾರ್ಯಕ್ಕೆ ಶುಭ ಹಾರೈಸಿದರು.

ವಾಸುದೇವ ಭಟ್ ಅವರು ರೂ.5,000 ದೇಣಿಗೆ ನೀಡುವುದಾಗಿ ಘೋಷಿಸಿದರೆ, ಘಟಕದ ಗೌರವ ಸಲಹೆಗಾರ ಸುರೇಶ್ ಕೋಟ್ಯಾನ್ ಅವರು ಒಂದು ಲೋಡ್ ಜಲ್ಲಿ ಒದಗಿಸುವ ಭರವಸೆ ನೀಡಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ ಅವರು ಮನೆಗೆ ಅಗತ್ಯವಿರುವ ಸಂಪೂರ್ಣ ಟೈಲ್ಸ್ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು. ಈ ಮಾನವೀಯ ಕಾರ್ಯಕ್ಕೆ ಹಲವರಿಂದ ವ್ಯಕ್ತವಾದ ಸಹಕಾರವು ಸಮಾಜದ ಒಗ್ಗಟ್ಟಿನ ಪ್ರತೀಕವಾಗಿತ್ತು.

ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳಾದ ವಿಧೇಶ್ ಎಂ., ಗಿರೀಶ್ ಕೋಟ್ಯಾನ್, ಜಯಶೀಲಾ, ಶೋಭಾ ದಿನೇಶ್, ಗುತ್ತಿಗೆದಾರ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ಕೆ ಕೈಜೋಡಿಸಿದರು. ಸೇವಾ ಮನೋಭಾವದಿಂದ ಆರಂಭವಾದ ಈ ಪ್ರಯತ್ನ, ಅಶಕ್ತ ಕುಟುಂಬದ ಬದುಕಿನಲ್ಲಿ ಹೊಸ ಬೆಳಕನ್ನು ಹರಿಸುವ ಮಹತ್ವದ ಹೆಜ್ಜೆಯಾಗಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!