ಸಿದ್ದಕಟ್ಟೆ : ಸಮಾನತೆ ಮತ್ತು ಮಾನವತೆಯ ಸಂದೇಶವನ್ನು ಸಾರಿದ ನಾರಾಯಣಗುರುಗಳ ಚಿಂತನೆಗಳು ಸಮಾಜವನ್ನು ಒಂದೇ ಸೂತ್ರದಲ್ಲಿ ಕಟ್ಟುವ ಶಕ್ತಿಯಾಗಿದೆ. ಮನುಷ್ಯನ ಮೌಲ್ಯವು ಅವನ ಜನ್ಮದಲ್ಲಲ್ಲ, ಅವನ ಮಾನವೀಯ ಗುಣಗಳಲ್ಲಿ ಇದೆ ಎಂಬುದು ಅವರ ತತ್ತ್ವದ ಸಾರವಾಗಿದೆ. ಪರಸ್ಪರ ಗೌರವ, ಪ್ರೀತಿ ಮತ್ತು ಸಹಕಾರದಿಂದ ಬದುಕಿದಾಗ ಮಾತ್ರ ಸಮಾಜ ನಿಜವಾದ ಅರ್ಥದಲ್ಲಿ ಬಲಿಷ್ಠವಾಗುತ್ತದೆ. ನಾರಾಯಣಗುರುಗಳ ಆದರ್ಶಗಳು ಇಂದು ಸಹ ಸಮಾನತೆ, ಸಹೋದರತೆ ಮತ್ತು ಮಾನವತೆಯ ದೀಪವನ್ನು ಬೆಳಗಿಸುತ್ತಿವೆ. ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು.

ಅವರು ಫೆಬ್ರವರಿ 12ರಂದು ಸಿದ್ದಕಟ್ಟೆ ಕರ್ಪೆ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 67 ರ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ ನೀಡಿದರು

ಈ ಸಂದರ್ಭದಲ್ಲಿ ಕುಪ್ಪೆಟ್ಟು ಪಂಜರ್ಲಿ ಮೂಲಸ್ಥಾನ ಸಮಿತಿ ಅಧ್ಯಕ್ಷರಾದ ಹರೀಶ್ ಸನಿಲ್, ಸಿದ್ಧಕಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ಮಹಿಳಾ ಅಧ್ಯಕ್ಷೆ ರಂಜಿನಿ ದಿವಾಕರ್, ಬಿಲ್ಲವ ಮಹಿಳಾ ಅಧ್ಯಕ್ಷೆ ಅನುರಾಧ ಜಾನುಗುರಿ, ಜಯ ಪೂಜಾರಿ, ಯುವವಾಹಿನಿ ಬಂಟ್ವಾಳ ಘಟಕದ ಕ್ರೀಡಾ ನಿರ್ದೇಶಕರಾದ ಧನುಷ್ ಮಧ್ವ, ಸಂಘಟನಾ ಕಾರ್ಯದರ್ಶಿ ಯಶೋಧರ ಕಡಂಬಲಿಕೆ , ಸದಸ್ಯರಾದ ರತ್ನಾಕರ ಪೂಜಾರಿ ಸಿದ್ದಕಟ್ಟೆ ದೇವಪ್ಪ ಪೂಜಾರಿ ಕರ್ಪೆ ಪ್ರಶಾಂತ್ ಏರಮಲೆ , ಯತೀಶ್ ಬೊಳ್ಳಾಯಿ, ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ದಿನೇಶ್ ಸುವರ್ಣ ರಾಯಿ ಮತ್ತಿತರರು ಉಪಸ್ಥಿತರಿದ್ದರು. ಸಂಗೀತದಲ್ಲಿ ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ. ವಿನಯ ಆಚಾರ್ಯ ಸಹಕರಿಸಿದರು
ಯುವವಾಹಿನಿ ಬಂಟ್ವಾಳ ಘಟಕದ ಸಮಾಜ ಸೇವಾ ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು


