ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 ರಂದು ಆಯೋಜಿಸಲಾದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ “ಯುವ ಸಂದೇಶ–2026” ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಉಪ್ಪಿನಂಗಡಿ ಆರಕ್ಷಕ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೌಶಿಕ್ ಬಿ.ಸಿ., ಯುವವಾಹಿನಿ ಸಂಸ್ಥೆ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಆಶ್ಫಾನ್ ಬಿ.ಎಸ್. ಅವರು ಕಲ್ಲೇರಿಯಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಚಾರ ನಿಯಮಗಳು ಜನರ ಸುರಕ್ಷತಿಗಾಗಿ ರೂಪುಗೊಂಡಿವೆ. ಅವುಗಳನ್ನು ಗೌರವಿಸಿ ಪಾಲಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬಹುದು. ನಿಯಮಗಳ ಉಲ್ಲಂಘನೆ ಆತ್ಮಹತ್ಯೆ ಪ್ರಯತ್ನಕ್ಕೆ ಸಮಾನವಾಗಿದ್ದು, ಆಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ನೀಡುವುದು ನಮ್ಮ ಮಕ್ಕಳನ್ನು ತೊಂದರೆಗೆ ತಳ್ಳಿದಂತೆಯೇ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ., ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಜಾನ್ ಕೆನ್ಯೂಟ್ ಶುಭ ಹಾರೈಕೆ ಮಾಡಿದರು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಅಜಿತ್ ಕುಮಾರ್ ಪಾಲೇರಿ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವೆಂಕಪ್ಪ ಪೂಜಾರಿ, ಕೃಷ್ಣ ರಾವ್ ಅರ್ತಿಲ, ಡಾ. ರಮ್ಯರಾಜಾರಾಮ್, ದೇವಿದಾಸ್ ರೈ, ದೇವಸ್ಥಾನದ ಸಿಬ್ಬಂದಿ ವರ್ಗ, ಜೆಸಿಐ ಅಧ್ಯಕ್ಷರಾದ ಅನೀಶ್ ಭಟ್, ಕರಾಯ ಕೋಟಿ ಚೆನ್ನಯ ಸೇವಾ ಟ್ರಸ್ಟ್ ಅಧ್ಯಕ್ಷರಾದ ದುರ್ಗಾ ಪ್ರಸಾದ್, ಪೆರಿಯೊಟ್ಟು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸತೀಶ್ ಪಿಲಿಗೂಡು, ಜಯಂತ್ ಶೆಟ್ಟಿ ಸುಣ್ಣಾಜೆ, ಉಪ್ಪಿನಂಗಡಿ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ಸಂಜೀವ ಗೌಡ, ಶ್ರೀ ರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ಯು.ಜಿ. ರಾಧಾ, ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಸಾಮಾಜಿಕ ಮುಂದಾಳುಗಳಾದ ಉಷಾ ಶರತ್, ಕೈಲಾರ್ ರಾಜಗೋಪಾಲ್ ಭಟ್, ಜಯಂತ್ ಪುರೋಳಿ, ವಿದ್ಯಾಧರ್ ಜೈನ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಗೌರವ ಸಲಹೆಗಾರರಾದ ವರದರಾಜ್ ಎಂ., ಕರುಣಾಕರ ಸುವರ್ಣ, ಮಾಜಿ ಅಧ್ಯಕ್ಷರಾದ ಜಯವಿಕ್ರಂ ಕಲ್ಲಾಪು, ಗುಣಕರ ಅಗ್ನಾಡಿ, ಡಾ. ಆಶಿತ್ ಎಂ.ವಿ., ಡೀಕಯ್ಯ ಗೌಂಡತ್ತಿಗೆ, ಕುಶಾಲಪ್ಪ ಪೂಜಾರಿ ಹತ್ತು ಕಳಸೆ, ಸೋಮ ಸುಂದರ್ ಕೊಡಿಪಾನ, ನಾಣ್ಯಪ್ಪ ಕೋಟ್ಯಾನ್ ಹಾಗೂ ಜಂಟಿ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಸಾಂತ್ಯ ವಂದಿಸಿದರು. ಘಟಕದ ಅಂಕಿತ್ ಎಂ.ಜೆ., ಸದಾಶಿವ ಬಂಗೇರ ಎಲಿಯ, ಸಂತೋಷ್ ಕುಮಾರ್, ಪುನೀತ್ ವಿ.ಡಿ., ಸುರೇಶ್ ಶಿಬಾರ್ಲ, ಲಿಖಿತ್ ಎಂ.ಜಿ., ಮನೋಹರ್ ಬಿಳಿಯೂರು, ವಸಂತ ಕುಂಡಾಪು, ಬಿ.ಕೆ. ಮಾಧವ, ಕುಶಾಲಪ್ಪ ಸುಣ್ಣಾಜೆ, ಸಂದೇಶ್ ಬೇಂಗಿಲ ಹಾಗೂ ರೋಟರಿ ಕ್ಲಬ್ನ ಶ್ರೀಕಾಂತ್ ಪಟೇಲ್, ನಾಗೇಶ್ ಪ್ರಭು ಅವರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.


