Yuvavahini

MAR 01, 2026 2.00 PM IST

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮಂಗಳೂರು ಘಟಕದ ಆತಿಥ್ಯದಲ್ಲಿ ವಿಕಾಸ 2026 ತರಬೇತಿ ಕಾರ್ಯಾಗಾರ

ಯುವವಾಹಿನಿ ‘ವಿಕಾಸ 2026’: ದಕ್ಷ ನಾಯಕತ್ವ ಹಾಗೂ ಶಿಸ್ತಿನಿಂದ ಸಂಘಟನೆ ಬಲವರ್ಧನೆ

ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು.

ಶ್ರೀ ಗೋಕರ್ಣನಾಥ ಕೋ ಓಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಚಂದ್ರಶೇಖರ ಕುಮಾರ್ ಇವರು ದೀಪ‌ ಬೆಳಗುವುದರ ಮೂಲಕ ಕಾರ್ಯಾಗಾರ ಉದ್ಘಾಟಿಸಿದರು.

ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಸಂಘಟನೆಗೆ ರಚನಾತ್ಮಕ ಕೆಲಸವೇ ಶಕ್ತಿ : “ಇಂದಿನ ಕಾಲಘಟ್ಟದಲ್ಲಿ ಸಂಘಟನೆಗಳು ಕೇವಲ ಔಪಚಾರಿಕ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು. ಸಮಾಜಕ್ಕೆ ಮತ್ತು ಜನಸಾಮಾನ್ಯರಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತಹ ರಚನಾತ್ಮಕ ಕೆಲಸಗಳನ್ನು ಮಾಡಬೇಕು,” ಎಂದು ಸ್ಮಿತೇಶ್ ಬಾರ್ಯ ಕರೆ ನೀಡಿದರು.

ಭಾವನಾತ್ಮಕ ಬೆಸುಗೆಯ ಅಗತ್ಯ : ಚಂದ್ರಹಾಸ ಬಳಂಜ
ಜೇಸೀ ರಾಷ್ಟ್ರೀಯ ತರಬೇತುದಾರರಾದ ಚಂದ್ರಹಾಸ ಬಳಂಜ ಮಾತನಾಡಿ, “ಸದಸ್ಯರನ್ನು ದೀರ್ಘಕಾಲ ಸಂಘಟನೆಯಲ್ಲಿ ಉಳಿಸಿಕೊಳ್ಳುವುದು ಒಂದು ಸವಾಲು. ಸದಸ್ಯರಿಗೆ ಗೌರವ, ಪ್ರೀತಿ ಮತ್ತು ಸೂಕ್ತ ಜವಾಬ್ದಾರಿ ಹಂಚಿದಾಗ ಮಾತ್ರ ಅವರು ಭಾವನಾತ್ಮಕವಾಗಿ ಸಂಘಟನೆಯೊಂದಿಗೆ ಬೆರೆಯುತ್ತಾರೆ. ಪ್ರತಿಯೊಬ್ಬ ಸದಸ್ಯನೂ ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡರೆ ಸಂಘಟನೆ ಹೆಮ್ಮರವಾಗಿ ಬೆಳೆಯಲು ಸಾಧ್ಯ,” ಎಂದರು.

ಸಂಸ್ಕಾರ ನೀಡುವ ಯುವವಾಹಿನಿ : ದಿನೇಶ್ ಸುವರ್ಣ ರಾಯಿ
ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕರು, ಕಾರ್ಯಗಾರದ ತರಬೇತುದಾರರಾದ ದಿನೇಶ್ ಸುವರ್ಣ ರಾಯಿ ಮಾತನಾಡಿ, “ಯುವವಾಹಿನಿ ಕೇವಲ ಒಂದು ಸಂಘಟನೆಯಲ್ಲ, ಅದೊಂದು ಸಂಸ್ಕಾರ ನೀಡುವ ವೇದಿಕೆ. ಇಲ್ಲಿನ ಕಟ್ಟುನಿಟ್ಟಿನ ಶಿಸ್ತು ಸಾಮಾನ್ಯ ಸದಸ್ಯನನ್ನು ಸಮಾಜದ ಉತ್ತಮ ಪ್ರಜೆಯನ್ನಾಗಿ ರೂಪಿಸುತ್ತದೆ. ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕಲೆಗೆ ಇಲ್ಲಿ ಹೆಚ್ಚಿನ ಅವಕಾಶವಿದೆ,” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಅತೀ ಹೆಚ್ಚು ಸದಸ್ಯರು ಭಾಗವಹಿಸಿದ್ದ ಕೊಲ್ಯ ಘಟಕವನ್ನು ಗೌರವಿಸಲಾಯಿತು.

ವಿಕಾಸ 2026 ಕಾರ್ಯಾಗಾರದಲ್ಲಿ 26 ಘಟಕಗಳ 174 ಸದಸ್ಯರು ಭಾಗವಹಿಸಿ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿತುಶ್ರೀ ಗೋಕರ್ಣನಾಥ ಕೋ ಓಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಚಂದ್ರಶೇಖರ ಕುಮಾರ್ ಇವರು ದೀಪ‌ ಬೆಳಗುವುದರ ಮೂಲಕ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪುರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಾಗಾರದಲ್ಲಿ ಪ್ರಥಮ ಹೆಸರು ನೊಂದಾವಣೆ ಮಾಡಿದ ಪಡುಬಿದ್ರೆ ಘಟಕವನ್ನು ಗೌರವಿಸಲಾಯಿತು.

ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ಹರೀಶ್ ಕೆ ಸುವರ್ಣ, ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಗಣೇಶ್ ವಿ ಕೋಡಿಕಲ್, ಮಂಗಳೂರು ಘಟಕದ ಕಾರ್ಯದರ್ಶಿ ಉಷಾ ಕೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ, ಶ್ರೀಕಾಂತ್ ಅಂಚನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ತರಬೇತುದಾರರನ್ನು ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಾಗಾರದಲ್ಲಿ ಅತೀ ಹೆಚ್ಚು ಸದಸ್ಯರು ಭಾಗವಹಿಸಿದ್ದ ಕೊಲ್ಯ ಘಟಕ ಹಾಗೂ ಪ್ರಥಮ ಹೆಸರು ನೊಂದಾವಣೆ ಮಾಡಿದ ಪಡುಬಿದ್ರೆ ಘಟಕವನ್ನು ಗೌರವಿಸಲಾಯಿತು.

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 14 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ಸಖೀ ಸಂವಾದ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು ಮತ್ತು ಈ ಸಂದರ್ಭದಲ್ಲಿ ಕೊಲ್ಯ ಘಟಕದ ಅಧ್ಯಕ್ಷ ನಿತಿನ್ ಕರ್ಕೇರಾ ಹಾಗೂ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಉಪಸ್ಥಿತರಿದ್ದರು

ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕ ಗಣೇಶ್ ವಿ ಕೋಡಿಕಲ್ ಸ್ವಾಗತಿಸಿದರು, ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ ಸುವರ್ಣ ಹಾಗೂ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಧನ್ಯವಾದ ನೀಡಿದರು ಯುವವಾಹಿನಿ ಮಂಗಳೂರು ಘಟಕದ ಸತೀಶ್. ಕೆ ಕಾರ್ಯಕ್ರಮ ನಿರ್ವಹಿಸಿದರು,

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!