ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಉದ್ಘಾಟನೆ ಮತ್ತು ಅತಿಥಿಗಳು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ. ಎಲ್. ಧರ್ಮ, ದ.ಕ. ಅಪರ ಜಿಲ್ಲಾಧಿಕಾರಿ ರಾಜು ಕೆ., ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡಿ.ಜಿ.ಎಂ. ತೇಜಸ್ವಿನಿ ವಿ. ಸಿ., ಎಸ್.ಬಿ.ಐ. ನಿವೃತ್ತ ಮ್ಯಾನೇಜರ್ ಸಂಧ್ಯಾ ಸೋಮೇಶ್ವರ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಟ್ರಸ್ಟೀ ಕೃತಿನ್ ಅಮೀನ್ ಭಾಗವಹಿಸಲಿದ್ದಾರೆ.
ಸಂವಾದ ಮತ್ತು ಸಂಪನ್ಮೂಲ ವ್ಯಕ್ತಿಗಳು
ಮಹಿಳೆಯರ ಕಾನೂನು, ನ್ಯಾಯ, ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಕುರಿತು ನಡೆಯುವ ಈ ಸಂವಾದದಲ್ಲಿ ಈ ಕೆಳಗಿನ ತಜ್ಞರು ವಿಷಯ ಮಂಡಿಸಲಿದ್ದಾರೆ:
ಸ್ತ್ರೀ ನ್ಯಾಯ: ಗೀತಾ ಕುಲಕರ್ಣಿ (ಸಹಾಯಕ ಪೊಲೀಸ್ ಕಮಿಷನರ್, ಮಂಗಳೂರು).
ಸ್ತ್ರೀ ಕಾನೂನು: ಮೇಘರಾಣಿ ಮೂಡಬಿದ್ರಿ (ವಕೀಲರು).
ಸ್ತ್ರೀ ಶಿಕ್ಷಣ: ಡಾ. ಬಿ. ಕೆ. ಸರೋಜಿನಿ (ಪ್ರಾಧ್ಯಾಪಕರು, ಏನೆಪೋಯ ಪರಿಗಣಿತ ವಿಶ್ವವಿದ್ಯಾಲಯ).
ಸ್ತ್ರೀ ಮನದ ಆರೋಗ್ಯ: ಡಾ. ರೇಷ್ಮಾ ಎನ್. ಎಸ್. (ಸಹಾಯಕ ಪ್ರಾಧ್ಯಾಪಕರು, ಮನೋವೈದ್ಯಕೀಯ ವಿಭಾಗ, ಕೆ.ಎಂ.ಸಿ.).
ಸಮಾರೋಪ ಸಮಾರಂಭ
ಅಪರಾಹ್ನ 12:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷ ನಿತಿನ್ ಕರ್ಕೇರಾ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ನ್ಯೂಸ್ ಚಾನಲ್ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಾಗೂ ಉದ್ಯಮಿ ರಸಿಕಾ ಮೋಹನ್ ದಾಸ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಈ ಕಾರ್ಯಾಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ವಿದ್ಯಾರ್ಥಿನಿಯರು ಹಾಗೂ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


