ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು.

ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. ಪೋಷಕರು ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ಜಾಗರೂಕತೆ ವಹಿಸಿಕೊಳ್ಳಬೇಕು. ಪ್ರಸ್ತುತ ಕಾಲಘಟ್ಟದ ಗಂಭೀರ ಸಮಸ್ಯೆಗಳಾದ ಸಾಮಾಜಿಕ ಜಾಲತಾಣದಿಂದ ಉಂಟಾಗುವ ವಿಲೋಮ ಪರಿಸ್ಥಿತಿ, ಅಮಲು ಪದಾರ್ಥ ಸೇವನೆ ಮುಕ್ತ ಸಮಾಜ ನಿರ್ಮಾಣಕ್ಕೆ ಮಹಿಳೆಯರು ದಿಟ್ಟ ಹೆಜ್ಜೆ ಇಡುವಲ್ಲಿ ಸಂಕಲ್ಪ ತೊಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ ವಹಿಸಿದ್ದರು.
ಮುಖ್ಯ ಅತಿಥಿಯಾದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಮಹಿಳಾ ಸಂಘಟನಾ ನಿರ್ದೇಶಕರಾದ ಸುಧಾ ಸುರೇಶ್ ರವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು, 20ನೇ ಶತಮಾನದಿಂದ ಆಚರಿಸಲು ಪ್ರಾರಂಭವಾದ ಮಾರ್ಚ್ 8 ರ ವಿಶ್ವ ಮಹಿಳಾ ದಿನ ಪ್ರತಿಯೊಬ್ಬ ಮಹಿಳೆಯರು ಪ್ರತಿದಿನ ಹೆಮ್ಮೆಯಿಂದ ಆಚರಿಸಬೇಕು ಎಂದರು.ಮುಂದುವರಿದು ಮಾತನಾಡಿ ನಮ್ಮ ಸಮಾಜದ ಮಕ್ಕಳನ್ನು ನಾಗರಿಕ ಸೇವೆ IAS IPS ಮಾಡಿಸಬೇಕು ಇದಕ್ಕಾಗಿ ಪ್ರೌಢಶಾಲೆಯಲ್ಲಿ ಅವರಿಗೆ ತರಬೇತಿ ನೀಡಿ ತಿಳುವಳಿಕೆ ಒದಗಿಸಬೇಕು -ಇದು ತನ್ನ ಕನಸಿನ ಕೂಸು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ,ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳು ,ಕಾರ್ಯಕ್ರಮದಲ್ಲಿ ಮಾತೃ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಯುವವಾಹಿನಿ ಕೂಳೂರು ಘಟಕದ ಕಾರ್ಯದರ್ಶಿ ವಂದಿಪ್.ಕೆ. ಸುವರ್ಣ, ಸಂಚಾಲಕರಾದ ಶೋಭಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಘಟಕದ ಸದಸ್ಯರಾದ ದೇವಿ ಪ್ರಸಾದ್ ರವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ನಿರ್ವಹಿಸಿದರು. ಸಂಚಾಲಕರಾದ ಶೋಭಾ ವಂದಿಸಿದರು.


