ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು.

ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಸಂಘಟನಾ ಕಾರ್ಯದರ್ಶಿಗಳ ಪಾತ್ರಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು. ಸಂಘಟನೆಯಲ್ಲಿ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿದ್ದು, ಅದು ಸಂಘಟನೆಯ ಯಶಸ್ಸಿಗೆ ಬುನಾದಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್ ಉಪಸ್ಥಿತರಿದ್ದರು
ಬಜಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ವಿನೋಧರ ಪೂಜಾರಿ ಅವರು, ಘಟಕದ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಸದಸ್ಯರ ಸಹಕಾರ ಅವಶ್ಯಕವಾಗಿದ್ದು, ಈ ರೀತಿಯ ಕಾರ್ಯಾಗಾರಗಳು ಸಂಘಟನಾ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುತ್ತವೆ ಎಂದರು.
ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಸ್ವಾಗತಿಸಿ ಕಾರ್ಯದರ್ಶಿ ಸುಚಿತ ದೇವರಾಜ್ ಧನ್ಯವಾದಗೈದರು.


