ಸಸಿಹಿತ್ಲು: ಯುವವಾಹಿನಿ (ರಿ.) ಸಸಿಹಿತ್ಲು ಘಟಕವು ದಿನಾಂಕ 08-03-2026 ರಂದು ಶ್ರೀ ಭಗವತಿ ದೇವಸ್ಥಾನ ಸಸಿಹಿತ್ಲಿನಲ್ಲಿ ನಡೆದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿತು.

ಈ ಸಂದರ್ಭದಲ್ಲಿ ಯುವವಾಹಿನಿ ಘಟಕದ ಸದಸ್ಯರು ಭಕ್ತಿಭಾವದಿಂದ ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಜೊತೆಗೆ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಸಮಿತಿಯ ಮುಖ್ಯ ಜವಾಬ್ದಾರಿಯನ್ನು ಸಹ ಘಟಕವು ಹೊತ್ತುಕೊಂಡು ಯಶಸ್ವಿಯಾಗಿ ನಿರ್ವಹಿಸಿತು.
ಈ ಸೇವಾ ಕಾರ್ಯವು ಯುವವಾಹಿನಿ ಘಟಕದ ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಸೇವೆಯ ಬದ್ಧತೆಯನ್ನು ಪ್ರತಿಬಿಂಬಿಸಿದೆ.


