Yuvavahini

JAN 19, 2014 4.03 AM IST

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು.

ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರುಗಿದ ಯುವ ಬಿಲ್ಲವ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೇಡಿಕೆಗಳು :

1.ರಾಷ್ರೀಯ ಹೆದ್ದಾರಿ ಬಿ.ಸಿ.ರೋಡಿನ ಮುಖ್ಯ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ನಾಮಕರಣ.

2. ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ಸಭಾಭವನದಲ್ಲಿ ಎದುರುಗಡೆ ರಸ್ತೆಗೆ ನಾರಾಯಣಗುರು ರಸ್ತೆ ಎಂದು ನಾಮಕರಣ.

3.ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ.

4. ಅವಳಿ ವೀರರಾದ ಕೋಟಿ ಚೆನ್ನಯ,ಕಾಂತಬಾರೆ ಬೂದಬಾರೆ ಸಾಹಸ ಕಥೆಗಳನ್ನು ಶಾಲಾ ಪಠ್ಯದಲ್ಲಿ ಸೇರ್ಪಡೆ.

5. 60 ವರ್ಷ ದಾಟಿದ ಮೂರ್ತೆದಾರರಿಗೆ ಮಾಸಿಕ ಪಿಂಚಣಿ ಯೋಜನೆ.

ಮುಂತಾದ ಬೇಡಿಕೆಗಳ ಮನವಿಯನ್ನು ಹತ್ತು ಸಹಸ್ರಕ್ಕೂ ಮಿಕ್ಕಿದ ಜನಸ್ತೋಮದ ಮುಂದೆ ಕರ್ನಾಟಕ ಸರಕಾರದ ನಗರಾಭಿವೃದ್ದಿ ಸಚಿವರಾದ ವಿನಯ ಕುಮಾರ್ ಸೊರಕೆ ಇವರಿಗೆ ನೀಡಲಾಯಿತು.

ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ಧನ ಪೂಜಾರಿ ಸಮಾವೇಶ ಉದ್ಘಾಟಿಸಿದರು.  ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ವರ್ಷದ ಅದ್ಯಕ್ಷ ಭುವನೇಶ್ ಪಚ್ಚಿನಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳ ವರ್ಕಳದ ಶಿವಗಿರಿ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕಳೆದ 25 ವರ್ಷಗಳಿಂದ ಬಂಟ್ವಾಳ ಯುವವಾಹಿನಿಯನ್ನು ಮುನ್ನಡೆಸಿದ 25 ಅದ್ಯಕ್ಷರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅದ್ಯಕ್ಷರಾದ ಜೆ.ಪಿ.ನಾರಾಯಣ ಸ್ವಾಮೀ ಬಿರ್ವೆರೆ ತುಡರ್ ರಜತ ಸಂಭ್ರಮ ವಿಶೇಷಾಂಕ ಬಿಡುಗಡೆಗೊಳಿಸಿದರು.

ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಸರಕಾರದ ರಾಷ್ಷ್ರೀಯ ಬಿಲ್ಲವರ ಮಹಾ ಮಂಡಲದ ಅದ್ಯಕ್ಷ ಜಯ ಸಿ ಸುವರ್ಣ, ಸೊರಬ ಶಾಸಕರಾದ ಮಧು ಬಂಗಾರಪ್ಪ, ಉದ್ಯಮಿ ರಮೇಶ್ ಕುಮಾರ್, ಉದ್ಯಮಿ ಸೀತಾರಾಮ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯದರ್ಶಿ ನಾಗೇಶ್ ಪೂಜಾರಿ ಎಲಬೆ, ಸಂಚಾಲಕರಾದ ಟಿ.ಶಂಕರ ಸುವರ್ಣ, ಸಲಹೆಗಾರರಾದ ಬಿ.ತಮ್ಮಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಜತ ಸಂಭ್ರಮ ಸಂಚಾಲಕರಾದ ಜಿತೇಂದ್ರ ಜೆ.ಸುವರ್ಣ ಸ್ವಾಗತಿಸಿದರು, ಉಪಾಧ್ಯಕ್ಷ ರಾಜೇಶ್ ಸುವರ್ಣ ಪ್ರಾಸ್ತಾವಿಕ ಮಾತನಾಡಿದರು, ಬಿ.ಶ್ರೀಧರ ಅಮೀನ್ ಧನ್ಯವಾದ ನೀಡಿದರು.

ಯುವ ಬಿಲ್ಲವ ಸಮಾವೇಶ ಯುವವಾಹಿನಿಯ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!