ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು
ಬೆಳಗಿನ ಉಪಹಾರದ ನಂತರ ಸದಸ್ಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳನ್ನು ಲಕ್ಷಿತ ಪೂಜಾರಿ ಕದ್ರಿ ಅವರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಮಧ್ಯಾಹ್ನ ಸವಿಯಾದ ಭೋಜನದ ಬಳಿಕವೂ ಆಟೋಟ ಸ್ಪರ್ಧೆಗಳು ಮತ್ತಷ್ಟು ಉತ್ಸಾಹದಿಂದ ಮುಂದುವರಿದವು. ಇದೇ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೇಶ್ ಬಿ.ಅವರು ಸುಮಧುರ ಗೀತ ಗಾಯನದ ಮೂಲಕ ಎಲ್ಲರ ಮನ ಗೆದ್ದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪುಅವರು ಮಾತನಾಡಿ, ಘಟಕದ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಶ್ಲಾಘಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ ಯುವ ಸಿಂಚನ ಕಾರ್ಯನಿರ್ವಾಹಕ ಸಂಪಾದಕರಾದ ಹರೀಶ್ ಪಚ್ಚನಾಡಿ , ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಾಮಾಜಿಕ ಜಾಲತಾಣದ ಸಂಪಾದಕಾರದ ರಾಜೇಶ್ ಸುವರ್ಣ ಮಾಜಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ಸುವರ್ಣ ರಾಯಿ, ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕರ್ಕೇರ, ಪ್ರಥಮ ಉಪಾಧ್ಯಕ್ಷರಾದ ಕಿರಣ್ ಪೂಂಜೆರಕೋಡಿ, ದ್ವಿತೀಯ ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೊ ಮತ್ತಿತರರು ಉಪಸ್ಥಿತರಿದ್ದರು ಮಹೇಶ್ ಬೊಳ್ಳಾಯಿ ಮತ್ತು ಸರಿತಾ ಇವರ ಸಂಚಾಲಕತ್ವದಲ್ಲಿ ಸ್ನೇಹ ಮಿಲನ ಯಶಸ್ವಿಯಾಗಿ ಸಂಪನ್ನಗೊಂಡಿತು ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ನೀಡಿದರು


