ಮಂಗಳೂರು : ಗುರುಗಳ ಆದರ್ಶಗಳನ್ನು ಅರಿಯಲು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೇತೃತ್ವದಲ್ಲಿ ಮೇ 26ರಿಂದ 29ರವರೆಗೆ ಕೇರಳದ ಶಿವಗಿರಿ, ಮರತ್ವಮಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ವಿವಿಧ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು.

ಈ ಅಧ್ಯಯನ ಪ್ರವಾಸದ ಮುಖ್ಯ ಉದ್ದೇಶ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಜೀವನ, ಶ್ರೇಷ್ಠ ತತ್ವದರ್ಶನಗಳು, ಸಾಮಾಜಿಕ ಸುಧಾರಣಾ ಕ್ರಾಂತಿ ಹಾಗೂ ಅವರು ವಿಶ್ವಕ್ಕೆ ನೀಡಿದ ಮಾನವತಾವಾದಿ ಸಂದೇಶಗಳ ಕುರಿತು ಆಳವಾದ ಅಧ್ಯಯನ ನಡೆಸುವುದಾಗಿತ್ತು. ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಮಾಡೂರು ಅವರು ಈ ಪ್ರವಾಸದ ಮಾರ್ಗದರ್ಶಕರಾಗಿ ಜವಾಬ್ದಾರಿ ನಿರ್ವಹಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಲೋಹಿತ್ ರೆಂಜಾಳ ಅವರು ಪ್ರವಾಸದ ನೇತೃತ್ವವನ್ನು ವಹಿಸಿದ್ದರು.

ಈ ಅಧ್ಯಯನ ಪ್ರವಾಸದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಉಪಾಧ್ಯಕ್ಷ ಸುರೇಶ್ ಪೂಜಾರಿ, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕ ನಿತೀಶ್ ಕುಮಾರ್, ಆರೋಗ್ಯ ನಿರ್ದೇಶಕ ರಾಕೇಶ್ ಮೂಡುಕೋಡಿ, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಾಮಾಜಿಕ ಜಾಲತಾಣ ಸಂಪಾದಕ ರಾಜೇಶ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕಡಬ, ನಾಗೇಶ್ ಪೂಜಾರಿ ಮಾಣಿ, ಶುಭಕರ ಪೂಜಾರಿ ವೇಣೂರು, ಪುತ್ತೂರು ಘಟಕದ ಅಧ್ಯಕ್ಷ ಸುಮಿತ್, ವೇಣೂರು ಘಟಕದ ಮಾಜಿ ಅಧ್ಯಕ್ಷ ಅರುಣ್ ಹಾಗೂ ಕೊಲ್ಯ ಘಟಕದ ನಂದನ್ ಸೇರಿದಂತೆ ಯುವವಾಹಿನಿಯ ಕುಟುಂಬಿಕರು ಭಾಗವಹಿಸಿದ್ದರು.

“ಈ ಅಧ್ಯಯನ ಪ್ರವಾಸವು ನಾರಾಯಣ ಗುರುಗಳ ಆದರ್ಶ ಹಾಗೂ ಚಿಂತನೆಗಳನ್ನು ಮತ್ತಷ್ಟು ಆಳವಾಗಿ ಅರಿಯಲು ನಮಗೆ ಅಪೂರ್ವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ನಮ್ಮ ಸಮಾಜಮುಖಿ ಚಟುವಟಿಕೆಗಳಿಗೆ ಮತ್ತು ಸಂಘಟನಾತ್ಮಕ ಕಾರ್ಯಗಳಿಗೆ ಇದು ಹೊಸ ಚೇತನ ಹಾಗೂ ಮಹತ್ತರ ಪ್ರೇರಣೆ ನೀಡುವಲ್ಲಿ ಅತ್ಯಂತ ಸಹಕಾರಿಯಾಗಿದೆ.” ಎಂದು ಪ್ರವಾಸದಲ್ಲಿ ಪಾಲ್ಗೊಂಡ 49 ಸದಸ್ಯರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.


