ಕೂಳೂರು, ಮೇ 15: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು 15-05-2026 ರಂದು ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಕ್ತಿಗೀತೆಗಳ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಿಸಿದರು.

ಈ ಸಂದರ್ಭದಲ್ಲಿ ಆತಿಥ್ಯ ವಹಿಸಿದ್ದ ಜಯಾನಂದ ಅಮೀನ್ ದಂಪತಿಗಳನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, ಫಲ-ಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ಮನೆ-ಮನೆ ಭಜನೆ ಕಾರ್ಯಕ್ರಮವು ಸದಸ್ಯರಲ್ಲಿ ಆಧ್ಯಾತ್ಮಿಕತೆ, ಪರಸ್ಪರ ಸೌಹಾರ್ದತೆ ಹಾಗೂ ಸಂಘಟನಾ ಬಾಂಧವ್ಯವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಕಾರ್ಯಕ್ರಮದಲ್ಲಿ ಘಟಕದ ಅನೇಕ ಸದಸ್ಯರು ಉಪಸ್ಥಿತರಿದ್ದರು.


