ಸುರತ್ಕಲ್, ಮೇ 28: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಸದಸ್ಯರ ನಡುವಿನ ಒಡನಾಟ ಹಾಗೂ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 2026ರ ಮೇ 28ರಂದು ಒಂದು ದಿನದ ಕಿರು ಪ್ರವಾಸವನ್ನು ಮುರುಡೇಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ದೇವಸ್ಥಾನ ಹಾಗೂ ಹೊನ್ನಾವರದ ಜೋಯ್ ಎಂಜಾಯ್ ವಾಟರ್ ಪಾರ್ಕ್ಗೆ ಆಯೋಜಿಸಲಾಗಿತ್ತು.

ಈ ಪ್ರವಾಸದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 50 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 6.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ನಡೆದ ಪ್ರವಾಸದಲ್ಲಿ ಸದಸ್ಯರು ದೇವರ ದರ್ಶನ ಪಡೆದು, ವಿವಿಧ ಮನರಂಜನಾ ಚಟುವಟಿಕೆಗಳು ಹಾಗೂ ಜಲಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂತಸದ ಕ್ಷಣಗಳನ್ನು ಹಂಚಿಕೊಂಡರು.
ಸದಸ್ಯರ ಪರಸ್ಪರ ವ್ಯಕ್ತಿ ಪರಿಚಯ, ಸ್ನೇಹ ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಈ ಕಿರು ಪ್ರವಾಸವು ಮಹತ್ವದ ಪಾತ್ರ ವಹಿಸಿತು. ಎಲ್ಲರೂ ಉತ್ಸಾಹ ಹಾಗೂ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಪ್ರವಾಸದ ಯಶಸ್ವಿ ಆಯೋಜನೆಯಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಪೂಜಾರಿ ಅವರು ಸಂಚಾಲಕರಾಗಿ ಕಾರ್ಯನಿರ್ವಹಿಸಿ ಪ್ರಮುಖ ಪಾತ್ರ ವಹಿಸಿದರು.
ಕಿರು ಪ್ರವಾಸದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಸದಸ್ಯರು ಹಾಗೂ ಕುಟುಂಬ ಸದಸ್ಯರಿಗೆ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.


