ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಎಲ್ಲರೂ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ತಲುಪಿ ವಿವಿಧ ಜಲಕ್ರೀಡೆಗಳು ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ದಿನವಿಡೀ ಸದಸ್ಯರು ಸಂತೋಷ, ಉಲ್ಲಾಸ ಮತ್ತು ಸ್ನೇಹಪರ ವಾತಾವರಣದಲ್ಲಿ ಸಮಯ ಕಳೆಯುವ ಮೂಲಕ ಪ್ರವಾಸವನ್ನು ಸ್ಮರಣೀಯವಾಗಿಸಿಕೊಂಡರು.
ಪ್ರವಾಸದ ಅಂತ್ಯದಲ್ಲಿ ಎಲ್ಲ ಸದಸ್ಯರು ಸುರಕ್ಷಿತವಾಗಿ ಮರಳಿದರು. ಈ ಪ್ರವಾಸದ ಯಶಸ್ಸಿಗೆ ಸಹಕರಿಸಿದ ಎಲ್ಲಾ 51 ಸದಸ್ಯರಿಗೆ ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು. ಸದಸ್ಯರ ಸಹಕಾರ, ಶಿಸ್ತು ಹಾಗೂ ಸಕ್ರಿಯ ಭಾಗವಹಿಸುವಿಕೆಯೇ ಈ ಪ್ರವಾಸವನ್ನು ಯಶಸ್ವಿಯಾಗಿ ಮತ್ತು ಅವಿಸ್ಮರಣೀಯವಾಗಿಸಿದೆ


