Yuvavahini

APR 10, 2017 11.24 AM IST

ಯುವಸಿಂಚನ - ಏಪ್ರಿಲ್ 2017

ಸಂಪಾದಕರ ಮಾತು – ಗಂಗಾಧರ ಪೂಜಾರಿ

ಪ್ರೀತಿಯ ವಾಚಕರೇ,

ಸಮಯ ಸಂದರ್ಭಗಳು ಒಂದೇ ರೀತಿ ಇರುವುದಿಲ್ಲ. ಬದಲಾಗುತ್ತಿರುವ ಈ ಕಾಲದಲ್ಲಿ ಅದೆಷ್ಟೋ ಬಾರಿ ನಾವು ಮಾಡುವ ಕಾರ್ಯದಲ್ಲಿ ನಮಗೆ ವಿರುದ್ಧವಾಗಿ ನಡೆಯಬಹುದು. ಅಂತಹ ಪರಿಸ್ಥಿತಿ ಬಂದಾಗ ದುಃಖಿಸುತ್ತಾ ಇರುವ ಬದಲು, ಎದುರಾದ ಪರಿಸ್ಥಿತಿಯನ್ನು ತನ್ನ ಕಡೆ ಪರಿವರ್ತನೆ ಮಾಡಿಸಿಕೊಳ್ಳುವವನೆ ನಿಜವಾದ ಜಾಣ. ಎಷ್ಟೇ ಗಂಭೀರವಾದ ಸೋಲನ್ನು ಗೆಲುವಾಗಿ ದಕ್ಕಿಸಿಕೊಂಡಿರುವ ಅಗ್ರಗಣ್ಯರು ಈ ಪ್ರಪಂಚದಲ್ಲಿ ತುಂಬಾ ಜನ ಇದ್ದಾರೆ. ಅಂತಹವರನ್ನು ಅನುಕರಿಸಿಕೊಂಡು ತನ್ನ ಯಾವುದೇ ಪ್ರತಿಕೂಲ ಪರಿಸ್ಥಿತಿಗಳನ್ನು ಸಕಾರಾತ್ಮಕವಾಗಿ ಅರ್ಥಮಾಡಿಕೊಂಡು ಮನಸ್ಸಿನ ಮೇಲೆ ಒತ್ತಡ ಹಾಕಿಕೊಳ್ಳದೆ, ಎದೆಗುಂದದೆ ಕಾರ್ಯಗಳನ್ನು ಮಾಡಬೇಕು. ಇದರಿಂದ ಜೀವನದಲ್ಲಿ ಗೆಲುವು ಖಂಡಿತ. ಜೊತೆಗೆ ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆ ಬೆಳಗುವುದು. ಆರ್ಥಿಕವಾಗಿ ತೊಂದರೆಯಲ್ಲಿರುವುದು, ನಿರುದ್ಯೋಗ, ಭವಿಷ್ಯದಲ್ಲಿ ತನ್ನ ಬಗ್ಗೆ ಗೊಂದಲ ಮತ್ತು ಇನ್ನು ಹಲವು ಕಾರಣಗಳಿಗಾಗಿ ನಾವು ನಿತ್ಯ ಚಿಂತಿತರಾಗಿರುತ್ತೇವೆ. ಚಿಂತೆ ನಮ್ಮ ಶಕ್ತಿ ಸಾಮರ್ಥ್ಯಗಳ ಜೊತೆಗೆ ನಮ್ಮ ಆರೋಗ್ಯವನ್ನು ಹಾಳುಗೆಡಹುದಲ್ಲದೆ, ನಮ್ಮನ್ನು ನರಕಕ್ಕೆ ತಳ್ಳುತ್ತದೆ. ಸಮಸ್ಯೆಗಳನ್ನು ಎದುರಿಸುವುದೇ ಜೀವನ. ಇವನ್ನೆಲ್ಲಾ ಮೆಟ್ಟಿ ನಿಂತವನೇ ನಿಜವಾದ ಮನುಜ.

ಒಬ್ಬ ಮನುಷ್ಯ ಸಾಧಿಸಲಾಗದ್ದು ಯಾವುದೂ ಇಲ್ಲ. ಯಾವುದೇ ಕೆಲಸ ಪ್ರಾರಂಭ ಮಾಡುವ ಮೊದಲು ಗೆದ್ದೇ ಗೆಲ್ಲುತ್ತೇನೆ ಎಂಬ ದೃಢ ನಂಬಿಕೆ ಬೆಳೆಸಿಕೊಳ್ಳಬೇಕು. ಆಗ ಗೆಲುವು ನಮ್ಮದಾಗುವುದು. ಒಬ್ಬ ಪ್ರತಿಭೆ ಇದ್ದವನು ತಾನು ಯಾವ ವಿಷಯದಲ್ಲಿ ಸಾಮರ್ಥ್ಯ ಹೊಂದಿರುವೆನು ಎಂಬುದನ್ನು ಅರ್ಥೈಸಿಕೊಳ್ಳಬೇಕು. ಆಗ ತನ್ನ ಗೆಲುವಿಗೆ ಅವನು ತುಂಬಾ ಹತ್ತಿರವಾಗುತ್ತಾನೆ. ಒಮ್ಮೆ ಏನನ್ನಾದರೂ ಸಾಧನೆ ಮಾಡಲು ಹೊರಟು ನಿಂತರೆ ಹಿಂತಿರುಗಿ ನೋಡಲೇಬಾರದು. ತನ್ನ ದೃಷ್ಟಿ ಯಾವಾಗಲೂ ಗುರಿ ಸಾಧನೆಯತ್ತಲೇ ಇರಬೇಕು. ಕ್ಷಣ ಹಿಂತಿರುಗಿ ನೋಡಿದರೆ ಮತ್ತೆ ಮುಂದೆ ಹೋಗಿ ಗೆಲ್ಲುವುದು ಬಹಳ ಕಷ್ಟವಾಗುತ್ತದೆ. ಒಮ್ಮೆ ಕೈಹಾಕಿದ ಕೆಲಸವನ್ನು ಗುರಿ ಮುಟ್ಟುವ ತನಕ ಮಾಡಿ ಮುಗಿಸುವವನೇ ನಿಜವಾದ ಗೆಲುವಿನ ಸಾಧಕ. ಈ ಸಾಧನೆಯ ದಾರಿಯಲ್ಲಿ ಯುವವಾಹಿನಿ ಸಂಸ್ಥೆ ಕೂಡಾ ನಡೆಯುತ್ತಿರುವುದು ಒಂದು ಹೆಮ್ಮೆಯ ಸಂಗತಿ. 30 ವರ್ಷ ತುಂಬಿ ಯೌವನಾವಸ್ಥೆಯಲ್ಲಿರುವ ನಮ್ಮ ಸಂಸ್ಥೆ ಇದೀಗ ಅಂತರಾಷ್ಟ್ರೀಯ ಜಾಲ ತಾಣದಲ್ಲಿ ಹರಿದಾಡುತ್ತಿದೆ. ನಮ್ಮ ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳನ್ನು ಇಡೀ ವಿಶ್ವದೆಲ್ಲೆಡೆ ಕ್ಷಣ ಮಾತ್ರದಲ್ಲಿ ತಿಳಿಯುವ ಸುಯೋಗ ಒದಗಿರುವುದು ನಮ್ಮ ನಿಮ್ಮೆಲ್ಲರ ಭಾಗ್ಯ. ಹಾಗಂತ ನಾವು ಕೈಕಟ್ಟಿ ಕೂರುವ ಹಾಗಿಲ್ಲ. ಸಂಸ್ಥೆಯ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ನಮ್ಮಿಂದ ಸಮಾಜವು ಇನ್ನೂ ಹೆಚ್ಚಿನದನ್ನು ನಿರೀಕ್ಷಿಸುತ್ತದೆ. ಈ ನಿಟ್ಟಿನಲ್ಲಿ ನಮ್ಮ ಎಲ್ಲಾ ಘಟಕ ಸದಸ್ಯರು ತಮ್ಮ ತಮ್ಮ ಕರ್ತವ್ಯವನ್ನು ಕಿಂಚಿತ್ತಾದರೂ ಪೂರೈಸಿದಾಗ ಮಾತ್ರ ಯುವವಾಹಿನಿಯು ಶಿಖರದ ತುದಿಯನ್ನು ತಲುಪಿ, ಇತರರಿಗೆ ಪ್ರೇರಣಾ ಶಕ್ತಿಯಾಗಿ ನಿಲ್ಲುವುದು ಖಂಡಿತ.

ಕಳೆದ ಸಂಚಿಕೆಯಲ್ಲಿ ಪ್ರಕಟವಾದ ಕಾರಣಿಕ ಪುರಷರಿಂದ ಸಮಾಜಕ್ಕೆ ಪ್ರೇರಣೆ ಎಂಬ ಆಶಯ ಲೇಖನದ ಮುಖಾಂತರ ಸ್ವಾರ್ಥ ಜೀವನದ ಈ ಸಮಾಜದ ಕಣ್ಣು ತೆರೆಯಿಸಿದ, ಸಮಾಜದ ಚಿಂತಕರೂ, ಹಿರಿಯ ಕವಿ, ಲೇಖಕರೂ ಆಗಿರುವ ಶ್ರೀ ಮುದ್ದು ಮೂಡುಬೆಳ್ಳೆ ಇವರಿಗೆ ಸಿಂಚನ ಬಳಗದ ನಮನಗಳು. ಈ ಸಂಚಿಕೆಯಲ್ಲಿ ’ನಾವು ನೀವೆಲ್ಲರೂ ಮಾನವರಾಗೋಣ’ ಆಶಯ ಲೇಖನದೊಂದಿಗೆ ನಮ್ಮ ವಿವಿಧ ಘಟಕಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಚಿತ್ರಣ ನಿಮ್ಮ ಮುಂದೆ ಇಡುತ್ತಿದ್ದೇವೆ. ನಿಮ್ಮ ಅಭಿಪ್ರಾಯ ಸೂಕ್ತ ಸಲಹೆಗಳೇ ನಮಗೆ ಪ್ರೇರಣೆ. ದಯವಿಟ್ಟು ಸ್ಪಂದಿಸಿ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!