Yuvavahini

MAY 05, 2026 6.00 PM IST

ಯುವವಾಹಿನಿ (ರಿ.) ಸಸಿಹಿತ್ಲು ಘಟಕ

ಸದಸ್ಯರ ವಾರ್ಷಿಕ ಕುಟುಂಬ ಸ್ನೇಹ ಮಿಲನ “ಸಂಭ್ರಮ – 2026”

ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರ ವಾರ್ಷಿಕ ಕುಟುಂಬ ಸ್ನೇಹ ಮಿಲನ ಕಾರ್ಯಕ್ರಮ “ಸಂಭ್ರಮ – 2026” ದಿನಾಂಕ 05-04-2026 ರಂದು ಸಸಿಹಿತ್ಲುವಿನ ಪಂಚಪುಷ್ಪ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ನಾಲ್ಕು ಕರೆಯ ಹಿರಿಯ ಗುರಿಕಾರರಾದ ದಯಾನಂದ್ ಅವರು ದೀಪ ಪ್ರಜ್ವಲನೆಗೊಳಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ಸಸಿಹಿತ್ಲು ಘಟಕವು ಹಮ್ಮಿಕೊಳ್ಳುತ್ತಿರುವ ವಿನೂತನ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಸಿಹಿತ್ಲು ಘಟಕಕ್ಕೆ ನಿಯೋಜಿಸಲ್ಪಟ್ಟ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಗಣೇಶ್ ಕೆ. ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಅಗ್ಗಿದಕಳಿಯ–ಸಸಿಹಿತ್ಲು ಇದರ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್. ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಪ್ರತಿವರ್ಷದ ಸಂಪ್ರದಾಯದಂತೆ ಗ್ರಾಮದ ಸಾಧಕರನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಪ್ರಕಾಶ್ ಕುಮಾರ್ ಬಿ.ಎನ್., ಹಿರಿಯ ಗುರಿಕಾರ ದಯಾನಂದ್ ಎಸ್., ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಸಿಹಿತ್ಲು ಇದರ ಮಾಜಿ ಕೋಶಾಧಿಕಾರಿ ವಸಂತ್ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ವಿವಿಧ ಪದಾಧಿಕಾರಿಗಳು, ವಿವಿಧ ಘಟಕಗಳ ಸದಸ್ಯರು, ಸಸಿಹಿತ್ಲು ಘಟಕದ ಎಲ್ಲಾ ಮಾಜಿ ಅಧ್ಯಕ್ಷರುಗಳು ಹಾಗೂ ಹೊಸ ಸದಸ್ಯರು ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಘಟಕದ ಅಧ್ಯಕ್ಷೆ ವೀಣಾ ಮನೋಜ್ ಅವರು ಅತಿಥಿಗಳು ಹಾಗೂ ಸದಸ್ಯರನ್ನು ಸ್ವಾಗತಿಸಿದರು. ಕಾರ್ಯದರ್ಶಿಯವರು ಧನ್ಯವಾದ ಸಮರ್ಪಿಸಿದರು. ಶೈಲೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಘಟಕದ ಸದಸ್ಯರು ತಮ್ಮ ಮನೆಗಳಲ್ಲಿ ತಯಾರಿಸಿ ತಂದ ವಿವಿಧ ಬಗೆಯ ಸಾಂಪ್ರದಾಯಿಕ ಮತ್ತು ರುಚಿಕರ ಆಹಾರ ಪದಾರ್ಥಗಳನ್ನು ಅತಿಥಿಗಳು ಹಾಗೂ ಸದಸ್ಯರಿಗೆ ಬಡಿಸಲಾಯಿತು. ಈ ವಿಶೇಷತೆಯು ಕುಟುಂಬ ಸದಸ್ಯರ ನಡುವಿನ ಆತ್ಮೀಯತೆ, ಸಹಭಾಗಿತ್ವ ಹಾಗೂ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿತು. ಸದಸ್ಯರು ಹಾಗೂ ಕುಟುಂಬದವರ ಸಕ್ರಿಯ ಭಾಗವಹಿಸುವಿಕೆಯಿಂದ “ಸಂಭ್ರಮ – 2026” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!