ಸುರತ್ಕಲ್ ಜೂನ್ 22: ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯಿದೆಯ ಅರಿವು, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಘು ನಾಯ್ಕ್ ಅವರು ಮಾತನಾಡಿ, “ಮಕ್ಕಳು ದೇಶದ ಭವಿಷ್ಯ. ಅವರ ಸುರಕ್ಷಿತ ಹಾಗೂ ನಿಶ್ಚಿಂತ ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಪೋಕ್ಸೋ ಕಾಯಿದೆ ಕೇವಲ ಕಾನೂನಲ್ಲ, ಮಕ್ಕಳಿಗೆ ನ್ಯಾಯ ಒದಗಿಸುವ ಪರಿಣಾಮಕಾರಿ ಸಾಧನವಾಗಿದೆ” ಎಂದು ಹೇಳಿದರು.
ಅವರು ಸ್ಮಾರ್ಟ್ಫೋನ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಯುವಜನರ ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿ, ಮಾಹಿತಿ ಮತ್ತು ಸಂವಹನಕ್ಕಾಗಿ ಇರುವ ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಣ್ ಸಾಲ್ಯಾನ್, ಆಡಳಿತ ಮಂಡಳಿ ಸದಸ್ಯ ಮಧುಸೂದನ್ ರಾವ್, ಘಟಕದ ಉಪಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಬಂಗೇರ, ಯುವವಾಹಿನಿ (ರಿ.) ಸುರತ್ಕಲ್ ಘಟಕದ ಅಧ್ಯಕ್ಷೆ ಶ್ರೀಮತಿ ರೇವತಿ ನವೀನ್, ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಯುವವಾಹಿನಿ (ರಿ.) ಸುರತ್ಕಲ್ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಸನಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಬಂಗೇರ ಸ್ವಾಗತಿಸಿದರು. ಲಕ್ಷ್ಮಣ್ ಸಾಲ್ಯಾನ್ ಧನ್ಯವಾದ ಸಮರ್ಪಿಸಿದರು.


