ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು.

ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲೆಯ ಸಹಶಿಕ್ಷಕಿ ಅನಿತಾ ಫಿಲೋಮಿನಾ ಡಿ’ಕೋಸ್ತಾ ಸ್ವಾಗತಿಸಿ ನಿರೂಪಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು, ಬಳಿಕ ವಿದ್ಯಾರ್ಥಿಗಳಿಗೆ ಉಚಿತ ಕೊಡೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ.ಎಸ್., ಪ್ರಥಮ ಉಪಾಧ್ಯಕ್ಷ ಮುಕೇಶ್ ಕುಮಾರ್, ದ್ವಿತೀಯ ಉಪಾಧ್ಯಕ್ಷೆ ತುಳಸಿ ಸುಜೀರ್, ಘಟಕದ ನಿರ್ದೇಶಕರು, ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಈ ಸೇವಾ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದ್ದು, ಯುವವಾಹಿನಿಯ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.


