ಕಟಪಾಡಿ, ಜೂನ್ 14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಜೇಸೀ ಭವನ, ಕಟಪಾಡಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಮಾನವೀಯ ಸೇವೆಯ ಉದ್ದೇಶದಿಂದ ನಡೆದ ಈ ಶಿಬಿರದಲ್ಲಿ ಘಟಕದ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ರಕ್ತದಾನವು ಶ್ರೇಷ್ಠ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಶಿಬಿರದಲ್ಲಿ ಹಲವಾರು ಸ್ವಯಂಪ್ರೇರಿತ ರಕ್ತದಾನಿಗಳು ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಎಲ್ಲ ರಕ್ತದಾನಿಗಳು, ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಯುವವಾಹಿನಿ (ರಿ.) ಕಟಪಾಡಿ ಘಟಕವು ಕೃತಜ್ಞತೆ ಸಲ್ಲಿಸಿತು.


