Yuvavahini

JUN 21, 2026 8.00 PM IST

ಯುವವಾಹಿನಿ (ರಿ.) ಮಂಗಳೂರು ಘಟಕ

ಅಧುನಿಕ ಯಾಂತ್ರಿಕ ಜೀವನಶೈಲಿಗೆ ಯೋಗ ಅತ್ಯಗತ್ಯ : ಸಂಜನಾ ಪ್ರಭು

ಮಂಗಳೂರು, ಜೂನ್ 21: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಉರ್ವಸ್ಟೋರ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಶಿಕ್ಷಕಿ ಸಂಜನಾ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಯೋಗದ ಮೂಲ ಸ್ವರೂಪ, ಅದರ ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ಮಹತ್ವ ಮತ್ತು ಆಧುನಿಕ ಜೀವನದಲ್ಲಿ ಯೋಗದ ಅಗತ್ಯತೆಯ ಕುರಿತು ಉಪನ್ಯಾಸ ನೀಡಿದರು.

ಜೂನ್ 21ರಂದು ಯೋಗ ದಿನವನ್ನು ಆಚರಿಸುವುದರ ಹಿಂದಿನ ಮಹತ್ವವನ್ನು ವಿವರಿಸಿದ ಅವರು, ಇದು ವರ್ಷದ ಅತಿ ದೀರ್ಘ ಹಗಲು ಹಾಗೂ ಅತಿ ಚಿಕ್ಕ ರಾತ್ರಿಯನ್ನು ಹೊಂದಿರುವ ದಿನವಾಗಿದ್ದು, ಆದಿಯೋಗಿ ಶಿವನು ಸಪ್ತ ಋಷಿಗಳಿಗೆ ಯೋಗದ ಜ್ಞಾನವನ್ನು ನೀಡಿದ ದಿನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನವು ಆಧ್ಯಾತ್ಮಿಕ ಹಾಗೂ ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ ಎಂದು ತಿಳಿಸಿದರು.

ಇಂದಿನ ಯಾಂತ್ರಿಕ ಜೀವನಶೈಲಿಯಲ್ಲಿ ದೈನಂದಿನ ಕೆಲಸಗಳೆಲ್ಲವೂ ಯಂತ್ರಗಳ ಅವಲಂಬಿತವಾಗಿವೆ. ಹಿಂದೆ ಜನರು ದೈಹಿಕ ಶ್ರಮದೊಂದಿಗೆ ಬದುಕುತ್ತಿದ್ದರೆ, ಇಂದು ತಂತ್ರಜ್ಞಾನದ ಮೇಲಿನ ಅತಿಯಾದ ಅವಲಂಬನೆಯಿಂದ ದೈಹಿಕ ಚಟುವಟಿಕೆ ಕಡಿಮೆಯಾಗುತ್ತಿದೆ. ಮಕ್ಕಳಿಂದ ಹಿರಿಯರವರೆಗೆ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಇತರ ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾಗಿರುವ ಪರಿಣಾಮ ಮನಶಾಂತಿ, ಆರೋಗ್ಯ ಮತ್ತು ಸಾಮಾಜಿಕ ಸಂಪರ್ಕಗಳು ಕ್ಷೀಣಿಸುತ್ತಿವೆ. ಇಂತಹ ಸಮಸ್ಯೆಗಳಿಗೆ ಯೋಗವೇ ಪರಿಣಾಮಕಾರಿ ಪರಿಹಾರವಾಗಿದೆ ಎಂದು ಹೇಳಿದರು.

ಯೋಗವು ಕೇವಲ ವ್ಯಾಯಾಮವಲ್ಲ; ದೇಹ, ಮನಸ್ಸು ಮತ್ತು ಉಸಿರಾಟವನ್ನು ಒಂದಾಗಿಸುವ ಜೀವನ ಪದ್ಧತಿಯಾಗಿದೆ. ಅಷ್ಟಾಂಗ ಯೋಗ, ಯಮ-ನಿಯಮಗಳ ಮೂಲಕ ಆರೋಗ್ಯಕರ ಆಹಾರ ಪದ್ಧತಿ, ಶಿಸ್ತು, ಸದೃಢ ದೇಹ ಮತ್ತು ಸಮತೋಲಿತ ಮನಸ್ಸನ್ನು ಬೆಳೆಸಿಕೊಳ್ಳಬಹುದು. ಯೋಗದಿಂದ ದೊರೆಯುವ ಮಾನಸಿಕ ನೆಮ್ಮದಿ ಇತರೆ ಯಾವುದೇ ದೈಹಿಕ ವ್ಯಾಯಾಮದಿಂದ ದೊರೆಯುವುದಿಲ್ಲ. ಯೋಗಕ್ಕೆ ವಯಸ್ಸಿನ ಮಿತಿಯಿಲ್ಲ; ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಪ್ರತಿಯೊಬ್ಬರೂ ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನ ನಡೆಸಬಹುದು ಎಂದು ಅವರು ಹೇಳಿದರು.

ಮೊಬೈಲ್‌ನಲ್ಲಿನ ಅನಗತ್ಯ ಮಾಹಿತಿಯನ್ನು ಅಳಿಸುವಂತೆ ವರ್ಷಕ್ಕೊಮ್ಮೆ ಯೋಗ ದಿನ ಆಚರಿಸುವುದರಿಂದ ಪ್ರಯೋಜನವಿಲ್ಲ. ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡಾಗ ಮಾತ್ರ ಅದರ ನಿಜವಾದ ಫಲ ದೊರೆಯುತ್ತದೆ ಎಂದು ತಿಳಿಸಿದ ಅವರು, ಕಳೆದ ಐದು ವರ್ಷಗಳಿಂದ ಉಚಿತವಾಗಿ ಯೋಗ ತರಗತಿಗಳನ್ನು ನಡೆಸಲು ಸ್ಥಳಾವಕಾಶ ಕಲ್ಪಿಸುತ್ತಿರುವ ಯುವವಾಹಿನಿ (ರಿ.) ಮಂಗಳೂರು ಘಟಕಕ್ಕೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹೆಸರಾಂತ ಚಲನಚಿತ್ರ ನಟ ಹಾಗೂ ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ತಂದೆ ಬಾಬು ಶೆಟ್ಟಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು. ಬಳಿಕ ಸಂಪನ್ಮೂಲ ವ್ಯಕ್ತಿ ಸಂಜನಾ ಪ್ರಭು ಹಾಗೂ ಬಾಬು ಶೆಟ್ಟಿಯವರನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಸ್ವಾಗತಿಸಿದರು. ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ವಂದಿಸಿದರು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!