ಗ್ರಾಮಚಾವಡಿ-ಕೊಣಾಜೆ, ಜುಲೈ 5: ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 5ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಚಾವಡಿ-ಕೊಣಾಜೆಯ ಅಧ್ಯಕ್ಷರಾದ ವಿಜೇತ್ ಪಜೀರು ಉದ್ಘಾಟಿಸಿದರು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್, ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ ಹಾಗೂ ಯುವ ಉದ್ಯಮಿ ನಿಶಾನ್ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಘಟಕದ ನಿಯೋಜಿತ ಅಧ್ಯಕ್ಷ ಮುರಳೀಧರ ಕೊಣಾಜೆ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಅಶೋಕ್ ಕುಮಾರ್, ಕಾರ್ಯದರ್ಶಿ ಮಿಥುನ್ ಪಜೀರು ಹಾಗೂ ನಿಯೋಜಿತ ಕಾರ್ಯದರ್ಶಿ ಆಶಾ ಪ್ರವೀಣ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ. ಭೋಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಸದಸ್ಯೆ ಶ್ರೀ ರಕ್ಷಾ ಎಸ್.ಎಚ್. ಅವರ ವಿಶೇಷ ಸಾಧನೆಯನ್ನು ಗುರುತಿಸಿ ಗೌರವಾಭಿನಂದನೆ ಸಲ್ಲಿಸಲಾಯಿತು. ಸ್ವಉದ್ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಸದಸ್ಯರಾದ ರವಿಕಲಾ ಜೆ. ಕೋಟ್ಯಾನ್ ಹಾಗೂ ಆಶಾ ಪ್ರವೀಣ್ ಅವರಿಗೆ ಸಾಧನ ಪುರಸ್ಕಾರ ಪ್ರದಾನಿಸಲಾಯಿತು. ಘಟಕದ ಎಲ್ಲಾ ಸದಸ್ಯರಿಗೆ ಅಧ್ಯಕ್ಷರು ಶಾಲು ಹೊದಿಸಿ ಕೃತಜ್ಞತಾ ಸನ್ಮಾನ ಸಲ್ಲಿಸಿದರು.
ಸಮಾರಂಭದಲ್ಲಿ ಬಾಲ ಸಂರಕ್ಷಣಾ ಕೇಂದ್ರ, ಕುತ್ತಾರುಗೆ ಅಗತ್ಯ ಸಾಮಗ್ರಿಗಳನ್ನು ಹಾಗೂ “ಸಂವೇದನ ಮಕ್ಕಳ ಮನೆ”, ಪಡೀಲುಗೆ ಯುವ ಸಂಜೀವಿನಿ ಯೋಜನೆಯಡಿ ಸಹಾಯಧನ ಮತ್ತು ಅಗತ್ಯ ವಸ್ತುಗಳನ್ನು ಅತಿಥಿ ರೋಝಿ ವಾಂಗ್ ಅವರು ₹10,000 ನೆರವಿನೊಂದಿಗೆ ವಿತರಿಸಿದರು. ಇದೇ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹಾಗೂ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾ ಮತ್ತು ಧನು ಪ್ರಾರ್ಥಿಸಿದರು. ಎರಡನೇ ಉಪಾಧ್ಯಕ್ಷ ಅಜಿತ್ ಪೂಜಾರಿ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಮಿಥುನ್ ಪಜೀರು ವಾರ್ಷಿಕ ವರದಿ ಮಂಡಿಸಿದರು. ಸ್ಥಾಪಕ ಅಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ನಿಯೋಜಿತ ಕಾರ್ಯದರ್ಶಿ ಆಶಾ ಪ್ರವೀಣ್ ವಂದಿಸಿದರು. ಸುರೇಖಾ ಹೆಚ್. ಪೂಜಾರಿ, ಹರ್ಷಿತಾ ಹಾಗೂ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.


