Yuvavahini

JUL 19, 2026 3.00 PM IST

ಯುವವಾಹಿನಿ (ರಿ) ಬಜಪೆ ಘಟಕದ ವತಿಯಿಂದ ಆಟಿದ ನೆಂಪು 2025

ಆಟಿ ಅನಿಷ್ಟವಲ್ಲ ಆತ್ಮಸ್ಟೈರ್ಯ ತುಂಬುವ ಕಾಲ -ಪ್ರೋ. ಭಾಸ್ಕರ್ ರೈ ಕುಕ್ಕುವಲ್ಲಿ

ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.

ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ ಆಗಮಿಸಿದ ಆಟಿಕಳೆoಜನಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಪ್ರತಿಪಕ್ಷ ನಾಯಕರಾದ ಅನಿಲ್ ಕುಮಾರ್ ಇವರು ಪಡಿಯಕ್ಕಿಯ ಸುರಿಯುವುದರ ಮೂಲಕ ಆಟಿದ ನೆಂಪು ಕಾರ್ಯಕ್ರಮದ ಉದ್ಘಾಟನೆಯನ್ನು ವಿಭಿನ್ನವಾಗಿ ನಡೆಸಿ ಮಾತಾನಾಡುತ್ತ ಯುವವಾಹಿನಿ ಬಜಪೆ ಘಟಕವು ಹಿಂದಿನ ಸಂಪ್ರದಾಯವನ್ನು ಪುನಃ ಮರುಕಲಳಿಸುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಆಟಿ ತಿಂಗಳು ಅನಿಷ್ಟ ಅಲ್ಲ ಆತ್ಮ ಸ್ಟೈರ್ಯಾ ತುಂಬುವ ಕಾಲ. ಆಷಾಡ ಮಾಸದಲ್ಲಿ ಪ್ರಕೃತಿ ದತ್ತ ಆಹಾರವೇ ಔಷಧಿಯಾಗಿ ನಮ್ಮನ್ನು ಕಾಪಾಡುತ್ತೆ. ಆಟಿ ಅಮವಾಸೆಯಂದು ಕುಡಿಯುವ ಪಾಲೇ ಕೆತ್ತೆಯಲ್ಲಿ ಸಾವಿರ ರೋಗವನ್ನು ನಿವಾರಿಸುವ ಶಕ್ತಿ ಇದೆ ಎಂದು ಆಟಿಯ ವಿಶೇಷತೆಯ ಬಗ್ಗೆ ತಮ್ಮ ಉಪನ್ಯಾಸದ ಮಾತಿನಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಸಾಹಿತ್ಯ -ಸಾಂಸ್ಕೃತಿಕ ಚಿಂತಕರಾದ ಪ್ರೋ! ಭಾಸ್ಕರ್ ರೈ ಕುಕ್ಕುವಲ್ಲಿ ಹೇಳಿದರು. ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಡ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಿ ಗೌರವಿಸಲಾಯಿತು . ವಿದ್ಯಾನಿಧಿ ನಿರ್ದೇಶಕಿಯಾದ ಡಾ. ಶಿಲ್ಪಾ ದಿನೇಶ್ ವಿದ್ಯಾರ್ಥಿಗಳನ್ನು ಸಭೆಗೆ ಪರುಚಯಿಸಿದರು

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪವರ್ ಲಿಫ್ಟಿಂಗ್ ಕ್ರೀಡಾ ಸಾಧಕಿ ಅಕ್ಷತಾ ಬೋಳ ಇವರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಬಜಪೆ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಇವರ ಸನ್ಮಾನ ಪತ್ರವನ್ನು ದಿವ್ಯ ಸುನಿಲ್ ಸಭೆಯ ಮುಂದಿಟ್ಟರು ಹಾಗೂ ಪುಟ್ಬಾಲ್ ಪಂದ್ಯಾಟದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯುತ್ತಿರುವ ಕುಮಾರಿ ಸಾನ್ವಿ ಎಸ್. ಪೂಜಾರಿ ಬಜಪೆ ಮತ್ತು ಯುವವಾಹಿನಿ ಬಜಪೆ ಘಟಕದ ನಿಕಟಪೂರ್ವ. ಅಧ್ಯಕ್ಷರಾದ ರೇಣುಕಾ ಶೇಖರ್ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.ಬಿಲ್ಲವ ಸಂಘದ ಗೌರವ ಅಧ್ಯಕ್ಷರಾದ ಎಲ್. ವಿ. ಅಮೀನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಮಾಹಿತಿ ಹಕ್ಕುಗಳ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಘಟಕದ ಸ್ಥಾಪಕ ಅಧ್ಯಕ್ಷರು ಅದ ವಿನೋದರ ಪೂಜಾರಿ ಇವರನ್ನು ಗೌರವಿಸಲಾಯಿತು.
ಯುವವಾಹಿನಿ ಕೇಂದ್ರ ಸಮಿತಿಯ ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಕೃಷಿಕರಾದ ಮೋಹನ್ ಪೂಜಾರಿ ಕಬೆತ್ತಿಗುತ್ತು, ಬಿಲ್ಲವ ಸಂಘ ಬಜಪೆಯ ಅಧ್ಯಕ್ಷರಾದ ಶಿವರಾಮ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೇವರಾಜ್ ಅಮೀನ್ ನಿರೂಪಿಸಿ, ಸಾನ್ವಿ ರಾಜೇಶ್ ಸಂದ್ಯಾ ಸುನಿಲ್, ಶರ್ಮಿಳಾ ಚಂದ್ರಶೇಖರ ಪ್ರಾರ್ಥಿಸಿ, ವಿಜಯ ಗೋಪಾಲ್ ಸ್ವಾಗತಿಸಿ ಕಾರ್ಯದರ್ಶಿ ಸುಚಿತ ದೇವರಾಜ್ ಧನ್ಯವಾದಗೈದರು. ಸಭೆಯ ನಂತರ ಕುಟುಂಬ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರ ಜಾನಪದ ನೃತ್ಯ ಹಾಗೂ “ಬಿಡಿದ ಪೊಂಜೊವು ” ಕಿರು ನಾಟಕ ಮನರಂಜಿಯವಾಗಿ ನಡೆಯಿತು.ಆಟಿಯ ವಿಶೇಷತೆಯ
ಪತ್ರಡ್ಡೆ,.ಮೆಂತೆ ಗಂಜಿ,ಸೇಮೆ ಅಡ್ಡೆ,ಕುಕ್ಕುದ ಚಟ್ನಿ,ತಿಮರೇ ಚಟ್ನಿ,ಕುಡುತ್ತ ಚಟ್ನಿ,ನುಂಗೆಲ್ ಮೀನು ಚಟ್ನಿ, ಪುನರ ಪುಲಿ ಚಟ್ನಿ,ಕನಿಲೆ ಪದೆಂಗಿ ಗಸಿ,ತೋಜಂಕ್ ಬೊಲೆ ಸುಕ್ಕ,ಉಪ್ಪಡ್ ಪಚ್ಚಿರ್ ಕಡ್ಲೆ ಸುಕ್ಕ,ಅನ್ನ,ಸಾರು,ಕೋಳಿ ಸಾರು,ಪಾಯಸ ಹೀಗೆ ಬಗೆ ಬಗೆಯ ಆಟಿಯ ತಿಂಡಿ ತಿನಿಸುಗಳನ್ನು ಎಲ್ಲರೂ ಸವಿಉಂಡು ಖುಷಿಯ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!