Yuvavahini

AUG 02, 2026 4.00 PM IST

ಯುವವಾಹಿನಿ ಸುಳ್ಯ ಘಟಕದಿಂದ ಆಟಿದ ಕೂಟ

ಯುವಜನತೆಗೆ ಆಟಿ ಸಂಸ್ಕೃತಿಯ ಅರಿವು ಮೂಡಿಸಿ: ರೇಖಾ ಗೋಪಾಲ್

ಬೆಳ್ಳಾರೆ, ಆ. 2: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಆಟಿ ತಿಂಗಳ ಮಹತ್ವವನ್ನು ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಭಾನುವಾರ ಬೆಳ್ಳಾರೆ ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಆಯೋಜಿಸಲಾದ ಆಟಿದ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಆಟಿ ತಿಂಗಳು ಕೇವಲ ಆಚರಣೆಯ ತಿಂಗಳಲ್ಲ; ಅದು ನಮ್ಮ ಪೂರ್ವಜರ ಜೀವನ ಪದ್ಧತಿ, ಪ್ರಕೃತಿಯೊಂದಿಗಿನ ಬಾಂಧವ್ಯ ಹಾಗೂ ಸಂಕಷ್ಟದ ದಿನಗಳನ್ನು ಸಹ ಧೈರ್ಯದಿಂದ ಎದುರಿಸಿದ ಬದುಕಿನ ಸಂಕೇತವಾಗಿದೆ. ಇಂತಹ ಪರಂಪರೆಯನ್ನು ಯುವಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಯುವವಾಹಿನಿ ನಡೆಸುತ್ತಿರುವ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಆಟಿ ತಿಂಗಳ ಮಹತ್ವದ ಕುರಿತು ಪ್ರಧಾನ ಉಪನ್ಯಾಸ ನೀಡಿದ ರಾಮಕುಂಜ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಸರಿತಾ ಜನಾರ್ಧನ್, ತುಳುನಾಡಿನ ಆಚಾರ-ವಿಚಾರ, ಜನಪದ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಕಾರ್ಯಕ್ರಮಗಳು ಪರಿಣಾಮಕಾರಿ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಯುವವಾಹಿನಿ (ರಿ.) ಸುಳ್ಯ ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕಡಬ ಹಾಗೂ ಬಿಲ್ಲವ ಸಂಘ (ರಿ.) ಸುಳ್ಯದ ಅಧ್ಯಕ್ಷ ಕೃಷ್ಣ ಕುಮಾರ್ ಅಲೆಕ್ಕಾಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಯುವವಾಹಿನಿ ಸುಳ್ಯ ಘಟಕದ ಸಾಂಸ್ಕೃತಿಕ ವಿಭಾಗದ ಸಂಚಾಲಕ ಪ್ರದೀಪ್ ನೆಟ್ಟಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ರಂಜಿತ್ ದರ್ಖಾಸ್ತು ವಂದಿಸಿದರು. ಹರ್ಷಿತಾ ಚೇತನ್ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ರೇಖಾ ಗೋಪಾಲ್ ಹಾಗೂ ಸರಿತಾ ಜನಾರ್ಧನ್ ಅವರನ್ನು ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ನಂತರ ಆಟಿ ತಿಂಗಳ ಸಾಂಪ್ರದಾಯಿಕ ಖಾದ್ಯಗಳನ್ನೊಳಗೊಂಡ ವಿಶೇಷ ಭೋಜನವನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!