ಕಡಬ, ಆಗಸ್ಟ್ 09: ಯುವಕರ ಒಗ್ಗಟ್ಟು ಹಾಗೂ ಸಂಘಟಿತ ಪ್ರಯತ್ನವೇ ಯುವವಾಹಿನಿಯ ಶಕ್ತಿ. ಯುವಜನತೆ ಸಮಾಜಮುಖಿ ಚಿಂತನೆಯೊಂದಿಗೆ ಒಗ್ಗಟ್ಟಾಗಿ ಮುನ್ನಡೆದಾಗ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲು ಸಾಧ್ಯ ಎಂದು ಶ್ರೀ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಹೇಳಿದರು. ಅವರು ದಿನಾಂಕ 09.08.2026ರಂದು ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ, ಬಿಲ್ಲವ ಸಂಘ ಕಡಬ ತಾಲೂಕು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಅಲಂಕಾರು–ಪೆರಾಬೆ ಗ್ರಾಮದ ಶ್ರೀ ರಕ್ತೇಶ್ವರಿ ದೈವಸ್ಥಾನ ಮಾಯಿಲ್ಗದ ಮುಂಭಾಗದ ಗದ್ದೆಯಲ್ಲಿ ಭಾನುವಾರ ನಡೆದ 5ನೇ ವರ್ಷದ ‘ಕೆಸರ್ ಕಂಡೊಡು ಬಿರುವೆರ್ನ ಗೊಬ್ಬುಲು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಯಿಲ್ಗ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೀಕ್ಷಿತ್ ಪಣೆಮಜಲು ಅವರ ಶ್ರೀ ನಾರಾಯಣ ಗುರುಗಳ ಸ್ತೋತ್ರದೊಂದಿಗೆ ಶ್ರೀ ರಕ್ತೇಶ್ವರಿ ದೈವಸ್ಥಾನದಿಂದ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಿತು. ಮೋಹಿನಿ ರುಕ್ಮಯ್ಯ ಪೂಜಾರಿ ಅವರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮೇಶ್ ಬಳ್ಪ ವಹಿಸಿದ್ದರು. ಕಡಬ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕೆ. ಐತ್ತೂರು, ಶ್ರೀಕೃಷ್ಣ ಎಲೆಕ್ಟ್ರಿಕಲ್ಸ್ ಮಾಲಕ ಅಭಿಲಾಷ್ ಪಿ.ಕೆ., ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಕುಸುಮ ಪಿ.ವೈ., ಪುತ್ತೂರು ಬಿಲ್ಲವ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಶ್ವೇತಾ ಕುದುಂಬೂರು, ಕಡಬ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಜಯಂತಿ ನಂದೋಳಿ, ಕೋಟಿ–ಚೆನ್ನಯ್ಯ ಮಿತ್ರವೃಂದದ ಅಧ್ಯಕ್ಷ ರಮೇಶ್ ಕೇಪುಲು, ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಶ್ರೀ ಗುರುದೇವ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಶೈಲೇಶ್ ಕುಮಾರ್, ಪೆರಾಬೆ–ಕಂತೂರು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಉದಯಕುಮಾರ್ ಎಣ್ಣೆತ್ತೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿದ ಮೋಹಿನಿ ರುಕ್ಮಯ್ಯ ಪೂಜಾರಿ ಮಾಯಿಲ್ಗ ಹಾಗೂ ಹರಿಣಾಕ್ಷಿ ಮಾಯಿಲ್ಗ ಅವರನ್ನು ಗೌರವಿಸಲಾಯಿತು.ಸರಿತಾ ಉಂಡಿಲ ಸ್ವಾಗತಿಸಿದರು. ಶಿವಪ್ರಸಾದ್ ನೂಚಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಿತಾ ಕುತ್ಯಾಡಿ ವಂದಿಸಿದರು. ಕೌಶಿಕ್ ಅಲಂಕಾರು, ಕೃಷ್ಣಪ್ಪ ಅಮೈ ಹಾಗೂ ಶಿವಪ್ರಸಾದ್ ನೂಚಿಲ ಕಾರ್ಯಕ್ರಮ ನಿರೂಪಿಸಿದರು.
ಮಹೇಶ್, ಪ್ರಶಾಂತ್ ಎನ್.ಎಸ್., ನೇತ್ರಾವತಿ ಬಳ್ಪ ಹಾಗೂ ತಂಡದವರ ನೇತೃತ್ವದಲ್ಲಿ ವಿವಿಧ ಕೆಸರುಗದ್ದೆ ಆಟೋಟ ಸ್ಪರ್ಧೆಗಳು ಅತ್ಯಂತ ಉತ್ಸಾಹದಿಂದ ನಡೆದವು. ಯುವಕರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವರು ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಜಯರಾಮ್ ಪುತ್ತೂರು, ಸಮಾಜಸೇವಕ ಜಯಂತ್ ನೆಕ್ಕಿಲಾಡಿ, ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಮಹೇಶ್, ಬಿಲ್ಲವ ಸಂಘ ಪುತ್ತೂರು ವಲಯ ಸಂಚಾಲಕ ದಿನೇಶ್ ಕೇಳುಪು, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಗಣ ಹಾಗೂ ವಕೀಲ ಕೌಶಿಕ್ ಅಲಂಕಾರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಸ್ಥಳದಾನ ಹಾಗೂ ಸಂಪೂರ್ಣ ಸಹಕಾರ ನೀಡಿದ ಉಮೇಶ್ ಮತ್ತು ವಿನುತಾ ಉಮೇಶ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತುಳುನಾಡಿನ ಗ್ರಾಮೀಣ ಕ್ರೀಡೆ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಬಿಂಬಿಸಿದ 5ನೇ ವರ್ಷದ ‘ಕೆಸರ್ ಕಂಡೊಡು ಬಿರುವೆರ್ನ ಗೊಬ್ಬುಲು’ ಕಾರ್ಯಕ್ರಮವು ಸಂಭ್ರಮ ಹಾಗೂ ಯಶಸ್ಸಿನೊಂದಿಗೆ ಸಂಪನ್ನಗೊಂಡಿತು.


