ಕಡಬ, ಆಗಸ್ಟ್ 14: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಬಳ್ಪ ಮತ್ತು ಎಣ್ಣೆಮಜಲು ಅಂಗನವಾಡಿ ಶಾಲೆಗಳ ಮಕ್ಕಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಕಡಬ ಘಟಕದ ಅಧ್ಯಕ್ಷ ಉಮೇಶ್ ಬಳ್ಪ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಅಗತ್ಯವಾದ ಪ್ರೋತ್ಸಾಹ ಹಾಗೂ ಸಹಕಾರ ನೀಡುವ ಮೂಲಕ ಅವರ ಉತ್ತಮ ಭವಿಷ್ಯ ರೂಪಿಸಲು ನೆರವಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಶ್ವೇತಾ ಚಂದ್ರಶೇಖರ ಕುದುಂಬೂರು, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಉಪಾಧ್ಯಕ್ಷೆ ಸರಿತಾ ಉಂಡಿಲ, ನಾರಾಯಣಗುರು ತತ್ವ ಅನುಷ್ಠಾನ ನಿರ್ದೇಶಕ ಜಯಪ್ರಕಾಶ್ ದೋಳ ಹಾಗೂ ಘಟಕದ ಸದಸ್ಯೆ ಹರಿಣಾಕ್ಷಿ ಅಂಙನ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ಎಲ್ಲಾ ಅಂಗನವಾಡಿ ಮಕ್ಕಳಿಗೆ ಐಡಿ ಕಾರ್ಡ್ಗಳನ್ನು ವಿತರಿಸಲಾಯಿತು. ಶಾಲಾ ಶಿಕ್ಷಕಿ ಧನ್ಯವಾದ ಸಮರ್ಪಿಸಿದರು.


