ಮಂಗಳೂರು, ಆಗಸ್ಟ್ 16: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೇವಾನಿಧಿ ಯೋಜನೆಯಡಿ ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಒಟ್ಟು ₹20,000 ಧನಸಹಾಯ ನೀಡಲಾಯಿತು. 29ನೇ ಸೇವಾನಿಧಿ ಯೋಜನೆಯ ಅಂಗವಾಗಿ ಸಜಿಪ ನಿವಾಸಿ, ಅನಾರೋಗ್ಯದಿಂದ ತೀವ್ರ ತೊಂದರೆಗೀಡಾದ 8 ವರ್ಷದ ತಾಶ್ವಿ ಅವರ ಕುಟುಂಬಕ್ಕೆ ₹10,000 ಹಾಗೂ 30ನೇ ಸೇವಾನಿಧಿ ಯೋಜನೆಯ ಅಂಗವಾಗಿ ಕಾಸರಗೋಡು ಜೋಡುಕಲ್ಲು ನಿವಾಸಿ ದುರ್ಗಾ ಪ್ರಸಾದ್ ಅವರ ಕುಟುಂಬಕ್ಕೆ ₹10,000 ಧನಸಹಾಯ ನೀಡಲಾಯಿತು.
ಯುವವಾಹಿನಿ (ರಿ.) ಕೂಳೂರು ಘಟಕದ ಅಧ್ಯಕ್ಷೆ ಗೀತಾ ವಸಂತ್ ಅವರು ಎರಡೂ ಕುಟುಂಬಗಳಿಗೆ ಧನಸಹಾಯದ ಮೊತ್ತವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಾ ನಿರ್ದೇಶಕಿ ಅನಿತಾ ತುಕಾರಾಮ್, ನಿಕಟಪೂರ್ವ ಅಧ್ಯಕ್ಷ ಲತೀಶ್ ಪೂಜಾರಿ, ಪ್ರಥಮ ಉಪಾಧ್ಯಕ್ಷ ಮುಕೇಶ್ ಕುಮಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ನಿರ್ದೇಶಕಿ ಮಧುಶ್ರೀ ಪ್ರಶಾಂತ್ ಹಾಗೂ ಸದಸ್ಯೆ ಜಯಲಕ್ಷ್ಮೀ ಉಪಸ್ಥಿತರಿದ್ದರು.
ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುವ ಮೂಲಕ ಯುವವಾಹಿನಿ (ರಿ.) ಕೂಳೂರು ಘಟಕವು ತನ್ನ ಸೇವಾ ಬದ್ಧತೆಯನ್ನು ಮುಂದುವರಿಸಿದ್ದು, ಸೇವಾನಿಧಿ ಯೋಜನೆಯ ಮೂಲಕ ಮಾನವೀಯ ಸ್ಪಂದನೆಗೆ ಮಾದರಿಯಾಗಿದೆ.


