ಮಂಗಳೂರು ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಗುರುಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.

ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮಹೇಶ್ ಅವರು ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಗುರುಪೂಜೆಗೆ ಚಾಲನೆ ನೀಡಿದರು. ಬಳಿಕ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಎಸ್.ಎನ್.ಡಿ.ಪಿ., ಕೃಷ್ಣ ಭಜನಾ ಮಂದಿರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದಲೂ ಭಜನಾ ಸೇವೆ ನೆರವೇರಿಸಲಾಯಿತು.
ನಂತರ ಬ್ರಹ್ಮಶ್ರೀ ನಾರಾಯಣ ಗುರುಗಳ 108 ಅಷ್ಟೋತ್ತರದೊಂದಿಗೆ ಗುರುಪೂಜೆ ನೆರವೇರಿಸಲಾಯಿತು. ಭಕ್ತರು ಭಕ್ತಿಭಾವದಿಂದ ಪೂಜೆಯಲ್ಲಿ ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು. ಪೂಜೆಯ ಬಳಿಕ ಆಗಮಿಸಿದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು ಹಾಗೂ ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ, ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಸುಧಾ ಸುರೇಶ್ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಉಪಸ್ಥಿತರಿದ್ದು ಗುರುಗಳ ಆಶೀರ್ವಾದ ಪಡೆದರು. ಮಹಿಳಾ ಘಟಕದ ಎಲ್ಲಾ ಸದಸ್ಯರು ಗುರುಗಳ ಸೇವೆಯಲ್ಲಿ ಭಕ್ತಿಭಾವದಿಂದ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.


