Yuvavahini

AUG 30, 2026 8.00 PM IST

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ ನಾರಾಯಣಗುರು ಜಯಂತಿ

ನಾರಾಯಣ ಗುರುಗಳ ಸಂದೇಶಗಳು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ದಾರಿದೀಪ : ಧನ್ಯಕುಮಾರ್ ರೈ

ಉಪ್ಪಿನಂಗಡಿ ಅಗಸ್ಟ್ 30 : ಮಾನವ ಕುಲಕ್ಕೆ ಜ್ಞಾನದ ಬೆಳಕನ್ನು ಪಸರಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ವಿವಿಧ ಸಮಾಜಗಳ ಮುಖಂಡರ ಸಹಭಾಗಿತ್ವದೊಂದಿಗೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಆಗಸ್ಟ್ 30ರಂದು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವ ಮಾನವ ಕುಲವನ್ನು ಗೌರವಿಸುವ ಹಾಗೂ ಸಮಾನತೆಯ ಸಂದೇಶ ಸಾರಿದ ನಾರಾಯಣ ಗುರುಗಳ ಜಯಂತಿಯ ಮಹತ್ವವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ಶ್ರೀ ಷಣ್ಮುಖ ದೇವಸ್ಥಾನ, ಕಾಂಚನ ಪೆರ್ಲ ಇದರ ಆಡಳಿತ ಮೊಕ್ತೇಸರ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಹಾಗೂ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಅಧ್ಯಕ್ಷ ಕರುಣಾಕರ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಧನ್ಯಕುಮಾರ್ ರೈ ಅವರು, ನಾರಾಯಣ ಗುರುಗಳು ಮಹಾನ್ ಸಾಮಾಜಿಕ ಕ್ರಾಂತಿಕಾರರಾಗಿದ್ದು, ಅವರ ಸಂದೇಶಗಳು ಇಂದಿಗೂ ಅನುಕರಣೀಯವಾಗಿವೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಗುರುಗಳ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗಾಗಿ ಭಾಷಣ ಸ್ಪರ್ಧೆ ಆಯೋಜಿಸುವ ಮೂಲಕ ಗುರುಗಳ ಸಂದೇಶವನ್ನು ಯುವ ಮನಸ್ಸುಗಳಲ್ಲಿ ಅಚ್ಚೊತ್ತಲು ಯುವವಾಹಿನಿ ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದರು.

ಕರುಣಾಕರ ಸುವರ್ಣ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಅಶಕ್ತರಿಗೆ ಆಹಾರ ಕಿಟ್ ವಿತರಿಸುವ ಮೂಲಕ ನಾರಾಯಣ ಗುರು ಜಯಂತಿಯನ್ನು ಯುವವಾಹಿನಿ ಘಟಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣ ಸಂದೇಶ ನೀಡುತ್ತದೆ ಎಂದು ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು ಇಲ್ಲಿನ ಉಪನ್ಯಾಸಕ ಶಿವರಾಜ್ ಗಟ್ಟಿ ಅವರು ಗುರು ಸಂದೇಶವನ್ನು ವಿವರಿಸುತ್ತಾ, ನಾರಾಯಣ ಗುರುಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ; ಅವರು ಸರ್ವ ಮಾನವ ಕುಲದ ಗುರುಗಳಾಗಿದ್ದಾರೆ. ಅವರ ಸಂದೇಶಗಳು ಎಲ್ಲರಿಗೂ ಸ್ಫೂರ್ತಿದಾಯಕ ಹಾಗೂ ಅನುಕರಣೀಯ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಗುರು ಸಂದೇಶದ ಅರಿವು

ಉಪ್ಪಿನಂಗಡಿ ಯುವವಾಹಿನಿ ಘಟಕದ ವ್ಯಾಪ್ತಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ “ಅಸ್ಪೃಶ್ಯತೆ ನಿವಾರಣೆಗೆ ನಾರಾಯಣ ಗುರುಗಳ ಕೊಡುಗೆ” ಹಾಗೂ ಪ್ರೌಢಶಾಲಾ ವಿಭಾಗದಲ್ಲಿ “ಸ್ವಾಸ್ಥ್ಯ ಸಮಾಜಕ್ಕಾಗಿ ನಾರಾಯಣ ಗುರುಗಳ ಸಂದೇಶ” ಎಂಬ ವಿಷಯಗಳ ಕುರಿತು ಮುಕ್ತವಾಗಿ ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯ ಅಂತಿಮ ಸುತ್ತು ನಡೆಯಿತು.

ಪ್ರಾಥಮಿಕ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ, ಉಪ್ಪಿನಂಗಡಿಯ ಹೃಷಿಕೇಶ್ ಪ್ರಥಮ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡೆತಡ್ಕದ ಚಾರ್ವಿ ದ್ವಿತೀಯ ಸ್ಥಾನ ಪಡೆದರು. ಪ್ರೌಢಶಾಲಾ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ, ಉಪ್ಪಿನಂಗಡಿಯ ಆದಿತ್ರಿ ಮುರಳೀಧರ ಪೆರಿಯಡ್ಕ ಪ್ರಥಮ ಹಾಗೂ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ, ಉಪ್ಪಿನಂಗಡಿಯ ಜಶ್ಮಿತಾ ದ್ವಿತೀಯ ಸ್ಥಾನ ಪಡೆದರು.

ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರದೊಂದಿಗೆ ಗೌರವ ಸ್ಮರಣಿಕೆಯನ್ನು ನೀಡಿ ಅಭಿನಂದಿಸಲಾಯಿತು. ತೀರ್ಪುಗಾರರಾಗಿ ಶಿವರಾಜ್ ಗಟ್ಟಿ, ಸುನೀತಾ ಹಾಗೂ ವನಿತಾ ಕೃಷ್ಣಪ್ಪ ಸಹಕರಿಸಿದರು.

ಐದು ಅಶಕ್ತ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

“ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ನಾರಾಯಣ ಗುರುಗಳ ಸಮಾನತೆಯ ಸಂದೇಶದಂತೆ ಜಾತ್ಯತೀತವಾಗಿ ಐದು ಅಶಕ್ತ ಬಡ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು. ಅದೇ ರೀತಿ “ವಿದ್ಯೆಯಿಂದ ಸ್ವತಂತ್ರರಾಗಿ” ಎಂಬ ಗುರುಗಳ ಸಂದೇಶದ ಆಶಯದಂತೆ, ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಸ್ಥಿತಿಯಲ್ಲಿದ್ದ ಗಾಯತ್ರಿ ಎಂಬ ವಿದ್ಯಾರ್ಥಿನಿಯ ವಿದ್ಯಾಭ್ಯಾಸ ಮುಂದುವರಿಸಲು ವಿದ್ಯಾರ್ಥಿವೇತನ ವಿತರಿಸಲಾಯಿತು. ಮೂಡಬಿದಿರೆಯ ಮೂರ್ತೆದಾರರ ಬ್ಯಾಂಕ್‌ನಲ್ಲಿ ಸುದೀರ್ಘ 31 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಯಶೋಧರ ಅವರು ವಿದ್ಯಾರ್ಥಿವೇತನವನ್ನು ನೀಡಿದರು.

ವಿವಿಧ ಗಣ್ಯರಿಂದ ಶುಭ ಹಾರೈಕೆ

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ವೈದ್ಯರಾದ ಡಾ. ನಿರಂಜನ್ ರೈ, ರೋಟರಿ ವಲಯ 4ರ ಅಸಿಸ್ಟೆಂಟ್ ಗವರ್ನರ್ ಡಾ. ರಾಜಾರಾಮ್ ಕೆ. ಬಿ., ಡಾ. ಸದಾನಂದ ಕುಂದರ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್ ಕುಮಾರ್ ಪಾಲೇರಿ, ಯುವವಾಹಿನಿ ಘಟಕದ ಗೌರವ ಸಲಹೆಗಾರ ವರದರಾಜ್ ಎಂ. ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕಡಬ ಅವರು ಭಾಗವಹಿಸಿ ಶುಭ ಹಾರೈಸಿದರು. ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಭಿಜ್ಞಾ ಪ್ರಾರ್ಥಿಸಿದರು. ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಲಿಖಿತ್ ಎಂ. ಜಿ. ಧನ್ಯವಾದ ಸಲ್ಲಿಸಿದರು. ಜೊತೆ ಕಾರ್ಯದರ್ಶಿ ನಯನಾ ಮನೋಹರ್ ಹಾಗೂ ಸದಸ್ಯ ಸುನೀಲ್ ಪೆರ್ನೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!